Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:12 - ಕನ್ನಡ ಸತ್ಯವೇದವು C.L. Bible (BSI)

12 ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾಜ್ಯಾ ಪ್ರೆಮಾಚ್ಯಾ ವಾಂಗ್ಡಿಯಾನು, ತುಮಿ ಅತ್ತಾ ಸೊಸುಲಾಗಲ್ಯಾ ತರಾಸಾಚ್ಯಾ ವಿಶಯಾತ್ ಅಜಾಪ್ ಹೊವ್ ನಕಾಸಿ, ತೆ ತುಮ್ಚೊ ವಿಶ್ವಾಸ್ ಪರಿಕ್ಷಾ ಕರ್ತಾ ಸೊಸುಕ್ ಹೊಯ್ನಸಲೊ ತರಾಸ್ ತುಮ್ಕಾ ಹೊವ್ಲಾ ಮನುನ್ ಚಿಂತುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:12
11 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ.


ವಿಶ್ವಾಸದಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ನಿಮ್ಮ ಸಹ ವಿಶ್ವಾಸಿಗಳು ಜಗತ್ತಿನಲ್ಲೆಲ್ಲಾ ಇಂಥ ಹಿಂಸೆಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದಿದೆ.


ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.


ಈಗಲಾದರೋ ನೀವು ಮುಂಚಿನಂತೆ ಲಂಪಟ ಜೀವನದಲ್ಲಿ ಅವರೊಡನೆ ಬೆರೆಯದಿರುವುದನ್ನು ಕಂಡು ಸುಖೇದಾಶ್ಚರ್ಯದಿಂದ ನಿಮ್ಮನ್ನು ದೂಷಿಸುತ್ತಾರೆ.


ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು