Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:16 - ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಪ್ರತಿಯಾಗಿ, ಒಬ್ಬನು ಕ್ರೈಸ್ತವಿಶ್ವಾಸಿ ಎಂಬ ಕಾರಣದಿಂದ ಹಿಂಸೆಯನ್ನು ಅನುಭವಿಸಿದರೆ ಅಂಥವನು ನಾಚಿಕೆಪಡಬೇಕಾಗಿಲ್ಲ; ಕ್ರೈಸ್ತವಿಶ್ವಾಸಿ ಎಂಬ ಆ ಹೆಸರನ್ನು ಪಡೆದುದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಕ್ರೈಸ್ತರಾಗಿರುವುದರಿಂದ ಸಂಕಟಪಟ್ಟರೆ, ನಾಚಿಕೊಳ್ಳಬಾರದು. ಆ (ಕ್ರೈಸ್ತ) ಹೆಸರಿನ ನಿಮಿತ್ತ ನೀವು ದೇವರಿಗೆ ಸ್ತೋತ್ರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವವರಾಗಿ ಬಾಧೆಪಟ್ಟರೆ ನಾಚಿಕೆಪಡಬೇಡಿರಿ. ಆ ಹೆಸರನ್ನು ಹೊಂದಿದ್ದಕ್ಕಾಗಿ ದೇವರನ್ನು ಘನಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮಿ ಎಕ್ ಕ್ರಿಸ್ತಾಚ್ಯಾ ವಿಶ್ವಾಸಾತ್ ಹೊತ್ತೊ ಮಾನುಸ್ ಮನುನ್ ತುಮ್ಕಾ ತರಾಸ್ ಗಾವ್ತಾ ಹೊಲ್ಯಾರ್ ತುಮಿ ಲಜುಚೆ ನ್ಹಯ್, ಖರೆ ತುಮಿ ಕ್ರಿಸ್ತಾಚ್ಯಾ ನಾವಾಸಾಟ್ನಿ ದೆವಾಕ್ ಧನ್ಯವಾದ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:16
20 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.


ಅದಕ್ಕೆ ಅಗ್ರಿಪ್ಪನು, “ಇಷ್ಟು ಅಲ್ಪಕಾಲದಲ್ಲೇ ನನ್ನನ್ನು ಕ್ರೈಸ್ತನನ್ನಾಗಿ ಮಾಡಬೇಕೆಂದು ಇಚ್ಛಿಸುತ್ತೀಯಾ?’ ಎಂದನು.


ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.


ಎಂದೇ ಮೂಡಣದವರೇ, ಸನ್ಮಾನಿಸಿರಿ ಸರ್ವೇಶ್ವರ ಸ್ವಾಮಿಯನು, ಕರಾವಳಿಯವರೇ, ಘನಪಡಿಸಿರಿ ಇಸ್ರಯೇಲಿನ ದೇವರಾದ ಸ್ವಾಮಿಯ ನಾಮವನು.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.


ನೀವು ಯಾರಿಗೆ ಶರಣರಾಗಿದ್ದೀರೋ ಅವರ ಶ್ರೇಷ್ಠ ನಾಮವನ್ನು ದೂಷಿಸುವವರೂ ಸಿರಿವಂತರೇ ಅಲ್ಲವೇ?


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು