Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:4 - ಕನ್ನಡ ಸತ್ಯವೇದವು C.L. Bible (BSI)

4 ಈಗಲಾದರೋ ನೀವು ಮುಂಚಿನಂತೆ ಲಂಪಟ ಜೀವನದಲ್ಲಿ ಅವರೊಡನೆ ಬೆರೆಯದಿರುವುದನ್ನು ಕಂಡು ಸುಖೇದಾಶ್ಚರ್ಯದಿಂದ ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತಾವು ಮಾಡುವ ಅಪರಿವಿುತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದುದರಿಂದ ನಿಮ್ಮ ಹಳೆಯ ಸ್ನೇಹಿತರೊಂದಿಗೆ ನೀವು ಮುಂಚಿನಂತೆ ಹಳೆಯ ದುಷ್ಕಾರ್ಯಗಳಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮಿ ಬುರ್ಶಿ ಅನಿ ಉಪೆಗಾಕ್ ನಸಲ್ಲಿ ಗೊಸ್ಟಿಯಾ ಬೊಲಿನಸಲ್ಲೆ ಬಗಲಿ ದೆವಾಚೆರ್ ವಿಶ್ವಾಸ್ ನಸಲ್ಲಿ ಲೊಕಾ ತುಮ್ಚ್ಯಾ ವಿಶಯಾತ್ ಅಜಾಪ್ ಹೊತಾತ್, ತಸೆ ಹೊವ್ನ್ ತೆನಿ ತುಮ್ಚ್ಯಾ ವಿಶಯಾತ್ ಬುರ್ಶಿ ಸಂಗ್ತಿಯಾ ಸಾಂಗ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:4
11 ತಿಳಿವುಗಳ ಹೋಲಿಕೆ  

ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


“ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹೋಯಿತು,” ಮತ್ತು “ಮೈ ತೊಳೆದ ಹಂದಿ ಕೊಳಚೆಯಲ್ಲಿ ಹೊರಳಲು ಹೋಯಿತು,” ಎಂಬ ಈ ಗಾದೆಗಳು ಇವರಿಗೆ ಸರಿಯಾಗಿ ಅನ್ವಯಿಸುತ್ತವೆ.


ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರಭಾಗಗಳನ್ನೇನೋ ಶುಚಿಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳ್ಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು