Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:6 - ಕನ್ನಡ ಸತ್ಯವೇದವು C.L. Bible (BSI)

6 ಮೃತರಿಗೂ ಶುಭಸಂದೇಶವನ್ನು ಬೋಧಿಸಲಾಯಿತು. ಏಕೆಂದರೆ, ದೇಹದ ಮಟ್ಟಿಗೆ ಸಕಲ ಮಾನವರಂತೆ ಮರಣವೆಂಬ ತೀರ್ಪನ್ನು ಹೊಂದಿದ್ದರೂ ದೇವರ ಆತ್ಮದ ಮಟ್ಟಿಗೆ ದೇವರಂತೆಯೇ ಜೀವಿಸಲೆಂದು ಆ ಸಂದೇಶವನ್ನು ಬೋಧಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಿಗಳಾಗಿದ್ದಾಗ ಹೊಂದಿದರು; ಅವರು ಆತ್ಮ ಸಂಬಂಧವಾಗಿ ದೇವರ ಜೀವದಲ್ಲಿ ಪಾಲುಗಾರರಾಗುವಂತೆ ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹ್ಯಾ ಕಾರನಾಸಾಟ್ನಿ ಮರಲ್ಲ್ಯಾಕ್ನಿ ಸೈತ್ ಬರಿ ಖಬರ್ ಸಾಂಗುನ್ ಹೊಲಿ, ಅಸೆ ಸಗ್ಳ್ಯಾಕ್ನಿ ಆಂಗಾ ಮಾಸಾಚ್ಯಾ ರುಪಾತ್ ಝಡ್ತಿ ಕರುನ್ ಹೊಲ್ಲೆ ರ್‍ಹಾಲ್ಯಾರ್‍ಬಿ ತೆನಿ ಆತ್ಮಿಕ್ ರುಪಾನ್ ದೆವಾಚೆ ಜಿವನ್ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:6
14 ತಿಳಿವುಗಳ ಹೋಲಿಕೆ  

ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಆಧ್ಯಾತ್ಮಿಕವಾಗಿಯೇ ತೆರಳಿ ಸೆರೆಯಲ್ಲಿದ್ದ ಆತ್ಮಗಳಿಗೆ ಶುಭಸಂದೇಶವನ್ನು ಬೋಧಿಸಿದರು.


ಪವಿತ್ರಾತ್ಮ ನಮ್ಮ ಜೀವಾಳವಾಗಿದ್ದರೆ, ಅವರೇ ನಮ್ಮ ಜೀವನದ ಮಾರ್ಗದರ್ಶಿಯೂ ಆಗಿರಬೇಕು.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ಧರ್ಮಶಾಸ್ತ್ರದ ಮೂಲಕ, ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ಬೆಂಕಿಯ ಮೇಲೆ ಅಧಿಕಾರ ಪಡೆದಿದ್ದ ಒಬ್ಬ ದೇವದೂತನು, ಆಗ ಬಲಿಪೀಠದ ಬಳಿಯಿಂದ ಬಂದನು. ಈತ ಕೈಯಲ್ಲಿ ಹರಿತವಾದ ಕುಡುಗೋಲನ್ನು ಹಿಡಿದಿದ್ದ ದೇವದೂತನನ್ನು ಉದ್ದೇಶಿಸಿ, “ನಿನ್ನ ಹರಿತವಾದ ಕುಡುಗೋಲನ್ನು ಕಳುಹಿಸು, ಭೂಮಿಯ ದ್ರಾಕ್ಷಾಫಲಗಳು ಪೂರ್ಣವಾಗಿ ಮಾಗಿವೆ; ಆ ಗೊಂಚಲುಗಳನ್ನು ಕೊಯ್ಯಬೇಕಾಗಿದೆ,” ಎಂದು ಕೂಗಿ ಹೇಳಿದನು.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು