Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮೊಟೊ ಕುರ್ಬುರ್ ದಿಲ್ಲ್ಯಾ ತನ್ನಾ ತೊ ತುಮಿ ಮಹಿಮೆನ್ ಭರಲೊ ಮುಕುಟ್ ಜೊಡುನ್ಗೆತ್ಯಾಸಿ, ತೆಜೊ ಪ್ರಜ್ವಳ್ ಕನ್ನಾಚ್ ಕಮ್ಮಿ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:4
22 ತಿಳಿವುಗಳ ಹೋಲಿಕೆ  

ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ.


ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು