Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:6 - ಕನ್ನಡ ಸತ್ಯವೇದವು C.L. Bible (BSI)

6 ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ದೇವರ ಶಕ್ತಿಯುತವಾದ ಹಸ್ತದ ಕೆಳಗೆ ನಮ್ರತೆಯಿಂದಿರಿ. ಯೋಗ್ಯಕಾಲವು ಸಮೀಪಿಸಿದಾಗ ಆತನು ನಿಮ್ಮನ್ನು ಮೇಲೆತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಸೆ ಮನುನ್ ತುಮ್ಕಾಚ್ ತುಮಿ ದೆವಾಚ್ಯಾ ಮೊಟ್ಯಾ ಹಾತಾಂಚ್ಯಾ ಖಾಯ್ಲ್ ಥವ್ನ್ ಘೆವಾ, ಅಸೆ ತೆಚೊ ಬರೊ ಎಳ್ ಯೆಲ್ಲ್ಯಾ ತನ್ನಾ ತೊ ತುಮ್ಕಾ ವೈರ್ ಉಕಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:6
41 ತಿಳಿವುಗಳ ಹೋಲಿಕೆ  

ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.


“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.


ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು I ಏರಿಸಿರುವನು ಉನ್ನತಿಗೆ ದೀನದಲಿತರನು II


ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.


ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದ್ದರಿಂದ ಹಾಗೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದುದರಿಂದ ಸರ್ವೇಶ್ವರಸ್ವಾಮಿ ರೆಹಬ್ಬಾಮನ ಮೇಲಿದ್ದ ಕೋಪವನ್ನು ತೊರೆದುಬಿಟ್ಟರು; ಅವನನ್ನು ಪೂರ್ತಿಯಾಗಿ ಹಾಳುಮಾಡಲಿಲ್ಲ.


ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.


ತುಂಬಬೇಕು ಎಲ್ಲ ಹಳ್ಳಕೊಳ್ಳಗಳನು ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನು. ನೆಲಸಮಮಾಡಬೇಕು ದಿಬ್ಬದಿಣ್ಣೆಗಳನು ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನು.


ಅವರು ಇಂದಿನವರೆಗೂ ಪಶ್ಚಾತ್ತಾಪಪಡಲಿಲ್ಲ. ನನಗೆ ಭಯಪಡಲಿಲ್ಲ. ನಿಮಗೂ ನಿಮ್ಮ ಪೂರ್ವಜರಿಗೂ ನಾನು ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲಿಲ್ಲ.”


ಕತ್ತರಿಸುವನು ಕೆಡುಕರ ಕೋರೆಕೋಡುಗಳನು I ಎತ್ತರಿಸುವನು ಸಜ್ಜನರ ಕೋರೆಕೊಂಬುಗಳನು II


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


“ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.


“ಬೇಲ್ಶಚ್ಚರರೇ, ಅವರ ಕುಮಾರರಾದ ತಾವು ಇದನ್ನೆಲ್ಲ ತಿಳಿದುಕೊಂಡಿದ್ದರೂ ದೀನ ಮನಸ್ಕರಾಗದೆ ಇದ್ದೀರಿ.


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II


ಕೆಲವು ಮಂದಿ ಆಶೇರ್ಯರು, ಮನಸ್ಸೆಯವರು ಹಾಗು ಜೆಬುಲೂನ್ಯರು ಮಾತ್ರ ದೀನಮನಸ್ಕರಾಗಿ ಜೆರುಸಲೇಮಿಗೆ ಬಂದರು.


ಆಮೋನನ ತಂದೆ ಮನಸ್ಸೆ ಸರ್ವೇಶ್ವರನ ಮುಂದೆ ತನ್ನನ್ನೇ ತಗ್ಗಿಸಿಕೊಂಡಿದ್ದನು. ಆಮೋನನಾದರೋ ತನ್ನನ್ನೇ ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು; ಸರ್ವೇಶ್ವರನ ನುಡಿಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.


ದೇವರ ಶಕ್ತಿ ಉನ್ನತೋನ್ನತ ಯಾರಿಹನು ಅವನಂಥ ಬೋಧಕ?


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ನಾನು ಅವರಿಗೆ ವಿರುದ್ಧವಾಗಿ ವರ್ತಿಸಿ ಶತ್ರುದೇಶದಲ್ಲಿ ಸೆರೆ ಸೇರಿಸಬೇಕಾಯಿತೆಂದು ಅರಿತುಕೊಂಡು, ತಮ್ಮ ಮೊಂಡುತನವನ್ನು ಬಿಟ್ಟು, ನನ್ನ ಆಜ್ಞೆಗೆ ತಲೆಬಾಗಿ, ತಮ್ಮ ಪಾಪ ಪರಿಣಾಮದ ಶಿಕ್ಷೆಯನ್ನು ಸ್ವೀಕರಿಸಿದ್ದೇ ಆದರೆ,


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ.


ಸಹೋದರರೇ, ಸಂಕಷ್ಟಗಳನ್ನು ತಾಳ್ಮೆಯಿಂದ ಸಹಿಸಿದ್ದಕ್ಕೆ ನಿದರ್ಶನ ಬೇಕೇ? ಪ್ರಭುವಿನ ಹೆಸರಿನಲ್ಲಿ ಬೋಧಿಸಿದ ಪ್ರವಾದಿಗಳನ್ನು ಸ್ಮರಿಸಿಕೊಳ್ಳಿ.


ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲ ಕಡೆಯ ಗಾಳಿಗೆ ತೂರಿಬಿಡುವೆನು; ಈ ಮಾತನ್ನು ಆಡಿದವನು ಸರ್ವೇಶ್ವರನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು