Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:8 - ಕನ್ನಡ ಸತ್ಯವೇದವು C.L. Bible (BSI)

8 ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹುಶ್ಯಾರ್ಕಿನ್ ರಾವಾ ಅನಿ ಜಾಗೆ ರಾವಾ ! ದುಶ್ಮನ್ ಗಿರೊ ಘಜ್ನಿ ಘಾಲ್ತಲ್ಲ್ಯಾ ಸಿವಾಚ್ಯಾ ಬಾಸೆನ್ ಹಿಂಡುನ್ಗೆತ್ ಹಾಯ್, ಅನಿ ಪಿಂಜುನ್ ಖಾವ್ಕ್ ಬಿ ಗಾವ್ತಾ ಕಾಯ್ ಮನುನ್ ರಾಕುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:8
61 ತಿಳಿವುಗಳ ಹೋಲಿಕೆ  

ಸೈತಾನನು ನಿಮಗೆ ಒಡ್ಡುವ ಕುತಂತ್ರಗಳ ವಿರುದ್ಧ ಅಚಲರಾಗಿ ನಿಲ್ಲಲು ನೀವು ಸಮರ್ಥರಾಗುವಂತೆ ದೇವರು ನೀಡುವ ಸಕಲ ಶಸ್ತ್ರಾಸ್ತ್ರಗಳನ್ನು ಧರಿಸಿಕೊಳ್ಳಿರಿ.


ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು.


“ಎಲ್ಲಿಂದ ಬಂದೆ?” ಎಂದು ಸರ್ವೇಶ್ವರನು ಅವನನ್ನು ಕೇಳಿದರು. “ಭೂಲೋಕದಲ್ಲೆಲ್ಲಾ ಗಸ್ತು ತಿರುಗಿ ಬಂದಿದ್ದೇನೆ,” ಎಂದು ಅವನು ಉತ್ತರಕೊಟ್ಟನು.


ಸೈತಾನನಿಗೆ ಅವಕಾಶ ಕೊಡಬೇಡಿ.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


“ಸಿಮೋನನೇ, ಸಿಮೋನನೇ, ಕೇಳು: ಗೋದಿಯನ್ನು ತೂರುವಂತೆ ಸೈತಾನನು ನಿಮ್ಮೆಲ್ಲರನ್ನೂ ಶೋಧಿಸಲು ಅಪ್ಪಣೆ ಕೇಳಿಕೊಂಡಿದ್ದಾನೆ.


ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.


ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು.


ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.


“ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.


ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು; ಅವನನ್ನು ಕೆಣಕುವವನು ಪ್ರಾಣಕ್ಕೆ ಅಪಾಯ ತಂದುಕೊಳ್ವನು.


ಗರ್ಜಿಸುತ್ತವೆ ಪ್ರಾಯಸಿಂಹಗಳು ಬೇಟೆಗಾಗಿ I ದೇವರನ್ನು ಎದುರು ನೋಡುತ್ತವೆ ಆಹಾರಕ್ಕಾಗಿ II


ಮಹಿಳೆ ಸಚ್ಚರಿತಳಾಗಿದ್ದು ವಿಶ್ವಾಸ, ಪ್ರೀತಿ ಮತ್ತು ಪವಿತ್ರತೆಯಲ್ಲಿ ಪ್ರವರ್ಧಿಸಿದರೆ, ತನ್ನ ತಾಯ್ತನದ ಮೂಲಕ ಸಂರಕ್ಷಣೆಯನ್ನು ಪಡೆಯುತ್ತಾಳೆ.


ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಅವರು ನವಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು.


ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


ಅಂತೆಯೇ, ಮಹಿಳೆಯರು, ಸಭ್ಯತೆಯನ್ನು ಮೀರದೆ ಘನತೆ, ಗೌರವಕ್ಕೆ ಒಪ್ಪುವಂತಹ ಉಡುಪನ್ನು ಧರಿಸಿಕೊಳ್ಳಬೇಕು.


ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು.


ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲೆ ಬೀಳುವೆನು. ಅವರ ಎದೆಯನ್ನು ಬಗಿದುಹಾಕುವೆನು. ಮೃಗರಾಜರಂತೆ ಅವರನ್ನು ನುಂಗಿಬಿಡುವೆನು. ಕಾಡುಮೃಗದಂತೆ ಅವರನ್ನು ಸೀಳಿಬಿಡುವೆನು.


ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.


ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೆ ಗುರುಗುಟ್ಟುವುದುಂಟೆ?


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಆಕೆ, “ನಮ್ಮ ವೈರಿಯೂ ಶತ್ರುವೂ ಬೇರಾರೂ ಅಲ್ಲ; ಇಗೋ, ಈ ಹಾಮಾನನೇ ಆ ದುಷ್ಟ,” ಎಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಭಯದಿಂದ ನಡುಗಿದನು.


ಸಂಸೋನನು ತನ್ನ ತಂದೆತಾಯಿಗಳ ಸಮೇತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿತೋಟಗಳ ಬಳಿಗೆ ಬಂದನು. ಅಲ್ಲಿ ಒಂದು ಪ್ರಾಯದ ಸಿಂಹ ಗರ್ಜಿಸುತ್ತಾ ಅವನೆದುರಿಗೆ ಬಂದಿತು.


ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ!


ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.


ಬಾಬಿಲೋನಿನವರು ಯುವಸಿಂಹಗಳಂತೆ ಒಟ್ಟಿಗೆ ಗರ್ಜಿಸುವರು, ಸಿಂಹದ ಮರಿಗಳಂತೆ ಗುರುಗುಟ್ಟುವರು.


ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ತಪ್ಪುಹೊರಿಸುವವನನು ನಿಲ್ಲಿಸು ಆ ಶತ್ರುವಿನ ಬಲಗಡೆಗೆ I ಗುರಿಪಡಿಸು ಅವನನು ಭ್ರಷ್ಟ ನ್ಯಾಯಾಧೀಶನ ತೀರ್ಪಿಗೆ II


ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.


ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದುಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ.


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು