Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:8 - ಕನ್ನಡ ಸತ್ಯವೇದವು C.L. Bible (BSI)

8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಮತ್ತು ಸತ್ಯವೆಂಬದು ನಮ್ಮಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮ್ಮಲ್ಲಿ ಪಾಪವಿಲ್ಲವೆಂದು ಹೇಳಿಕೊಂಡರೆ, ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುವವರಾಗಿದ್ದೇವೆ ಮತ್ತು ನಮ್ಮಲ್ಲಿ ಸತ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಮಿ ಕೊನ್‍ ತರ್ ಪಾಪ್ ಕರುಕ್ ನಾ ಮನುನ್ ಸಾಂಗುನ್ ಘೆಟ್ಲ್ಯಾರ್ , ಅಮ್ಕಾ ಅಮಿಚ್ ಪಸ್ವುನ್ ಪಾಡ್ವುನ್ ಘೆತಾಂವ್ ಅನಿ ಅಮ್ಚ್ಯಾಕ್ಡೆ ಖರೆ ಮನ್ತಲೆ ನಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:8
33 ತಿಳಿವುಗಳ ಹೋಲಿಕೆ  

ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.


ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ.


“ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು?


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?


“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ, ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ,


ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.


ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.


ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


“ಹೌದು, ನೀನು ಹೇಳುವುದು ಸರಿಯೆಂದು ನನಗೆ ಗೊತ್ತು: ನರಮಾನವ ದೇವರ ಮುಂದೆ ಸತ್ಯವಂತನಾಗಿರುವುದೆಂತು?


ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.


ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.


“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಪವಿತ್ರಗ್ರಂಥದಲ್ಲಿ ಹೀಗಿದೆ:


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ಆದರೆ ಒಬ್ಬ ವ್ಯಕ್ತಿಯ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ ಯಾಜಕನು ನೋಡುವಾಗ


ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಡವೆ ವಸ್ತು ಒಂದೂ ಇಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು