Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:7 - ಕನ್ನಡ ಸತ್ಯವೇದವು C.L. Bible (BSI)

7 ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರಿಯ ಮಕ್ಕಳೇ, ನಿಮ್ಮನ್ನು ಯಾರೂ ತಪ್ಪುಮಾರ್ಗಕ್ಕೆ ಎಳೆಯದಂತೆ ನೋಡಿಕೊಳ್ಳಿರಿ. ಕ್ರಿಸ್ತನು ನೀತಿವಂತನಾಗಿದ್ದಾನೆ. ಆತನಂತೆ ನೀತಿವಂತನಾಗಿರಲು ಬಯಸುವವನು ಒಳ್ಳೆಯದನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪೊರಾನು, ಕೊನ್ಬಿ ತುಮ್ಕಾ ಪಸ್ವಿನಾ ಸಾರ್ಕೆ ಹುರ್ಶ್ಯಾಕಿನ್ ರ್‍ಹಾವಾ, ಕ್ರಿಸ್ತ್ ನಿತಿವಂತ್ ಹೊವ್ನ್ ಹಾಯ್ ತಸೊ ಕೊನ್ ನಿತಿವಂತ್ ಹೊವ್ನ್ ಜಿವನ್ ಕರ್ತಾ ತೊಚ್ ಖರೊ ನಿತಿವಂತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:7
28 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ I ಆತನ ಸನ್ನಿಧಿಯಲ್ಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ II


ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”


ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.


ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು