Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:10 - ಕನ್ನಡ ಸತ್ಯವೇದವು C.L. Bible (BSI)

10 ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗಂದರೆ ದೇವರು ತನ್ನ ಮಗನ ವಿಷಯವಾಗಿ ಹೇಳಿರುವ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾಚ್ಯಾ ಲೆಕಾಚ್ಯಾ ವರ್ತಿ ವಿಶ್ವಾಸ್ ಥವಲ್ಲೊ, ತಿ ಸಾಕ್ಷಿ ಅಪ್ನಾಚ್ಯಾ ಮನಾತ್ ಭುತ್ತುರ್ ಥವ್ನ್ ಘೆತಾ; ಜೆ ಕೊನ್ ಮಾನಿನಾ ತೆಕಾ ದೆವಾನುಚ್ ಝುಟೊ ಕರ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ದೆವಾನ್ ಅಪ್ನಾಚ್ಯಾ ಲೆಕಾಚ್ಯಾ ವಿಶಯಾತ್ ದಿಲ್ಲ್ಯಾ ಸಾಕ್ಷಿಕ್ ತೆನಿ ವಿಶ್ವಾಸ್ ಕರುಕ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:10
22 ತಿಳಿವುಗಳ ಹೋಲಿಕೆ  

ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ.


ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.


ಅವರ ಸಂದೇಶ ನಿಮ್ಮಲ್ಲಿ ನೆಲಸಿಲ್ಲ. ಏಕೆಂದರೆ, ಅವರು ಕಳುಹಿಸಿದವನಲ್ಲಿ ನೀವು ವಿಶ್ವಾಸವಿಡಲಿಲ್ಲ.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.


ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ಈ ಮಾತು ಅಬದ್ಧವೆಂದು ಯಾರು ಸ್ಥಾಪಿಸಬಲ್ಲರು? ನಾನು ಸುಳ್ಳುಗಾರನೆಂದು ನಿಮ್ಮಲ್ಲಿ ಯಾರು ತೋರಿಸಬಲ್ಲನು?”


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.


ನಾನು ಮತ್ತೆ ಹೇಳುವುದೇನೆಂದರೆ; ವಾರಸುದಾರನು ತಂದೆಯ ಆಸ್ತಿಗೆಲ್ಲಾ ಹಕ್ಕುದಾರನಾಗಿದ್ದರೂ, ಅವನು ಬಾಲಕನಾಗಿರುವ ತನಕ ಅವನಿಗೂ ಆಳಿಗೂ ವ್ಯತ್ಯಾಸವಿರುವುದಿಲ್ಲ.


(ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು