Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:24 - ಕನ್ನಡ ಸತ್ಯವೇದವು C.L. Bible (BSI)

24 ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಸಮುವೇಲನು ಎಲ್ಲಾ ಜನರಿಗೆ - ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ ಎನ್ನಲು ಜನರೆಲ್ಲರೂ - ಅರಸನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:24
14 ತಿಳಿವುಗಳ ಹೋಲಿಕೆ  

ಯಾಜಕ ಚಾದೋಕನು ದೇವದರ್ಶನದ ಗುಡಾರದಲ್ಲಿದ್ದ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದುತ್ತಾ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ!” ಎಂದು ಘೋಷಿಸಿದರು.


ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ಆಗ ನೀವು ಅಗತ್ಯವಾಗಿ ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡವನನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೆ ಹೊರತು ಅನ್ಯದೇಶದವನನ್ನು ನೇಮಿಸಬಾರದು.


ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ಅಲ್ಲಿ ಯಾಜಕ ಚಾದೋಕನು ಹಾಗು ಪ್ರವಾದಿ ನಾತಾನನು ಅವನನ್ನು ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರು ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಲಿ.


ನನ್ನ ಒಡೆಯರೂ ಅರಸರೂ ಆದ ತಾವು ಹಾಗೇ ಮಾಡದೆ, ಸತ್ತು ಪಿತೃಗಳ ಬಳಿಗೆ ಸೇರಿಕೊಂಡರೆ, ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುತ್ತೇವೆ,” ಎಂದು ಹೇಳಿದಳು.


ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲ ಅತಿಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು.


ಸಮುವೇಲನು ಇಸ್ರಯೇಲರೆಲ್ಲರಿಗೆ, “ನೋಡಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ, ನಿಮಗೊಬ್ಬ ಅರಸನನ್ನು ನೇಮಿಸಿದೆ.


“ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸ ಇವನೇ; ಸರ್ವೇಶ್ವರ ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ.


ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸರು ಚಿರಂಜೀವಿಯಾಗಿ ಬಾಳಲಿ! ಅರಸರು ಚಿರಂಜೀವಿಯಾಗಿ ಬಾಳಲಿ!” ಎಂದು ಘೋಷಿಸಿದನು.


ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು