Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:15 - ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ ಯೆಹೋವನಿಗೆ ಸಮಾಧಾನಯಜ್ಞಗಳನ್ನು ಸಮರ್ಪಿಸಿ ಸೌಲನೊಡನೆ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:15
12 ತಿಳಿವುಗಳ ಹೋಲಿಕೆ  

ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದ ನಂತರ ನಾನು ದಹನಬಲಿಗಳನ್ನೂ ಶಾಂತಿಸಮಾಧಾನಬಲಿಗಳನ್ನೂ ಸಮರ್ಪಿಸುವುದಕ್ಕಾಗಿ ಅಲ್ಲಿಗೆ ಬಂದು ನೀನು ಮಾಡಬೇಕಾದುದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು,” ಎಂದು ಹೇಳಿದನು.


ಸಮುವೇಲನು ಇಸ್ರಯೇಲರನ್ನು ಮಿಚ್ಪೆಗೆ ಕರೆಯಿಸಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿಸಿದನು.


ಆದರೆ ನೀವು ಅಹಂಭಾವದಿಂದ ಕೊಚ್ಚಿಕೊಳ್ಳುತ್ತೀರಿ. ಹಾಗೆ ಕೊಚ್ಚಿಕೊಳ್ಳುವುದು ಸರಿಯಲ್ಲ.


ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.


ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ ಹೋದರು. “ಅದಿರಲಿ; ನಮಗೆ ಅರಸನನ್ನು ಕೊಡು; ನಾವು ಇತರ ಜನಾಂಗಗಳಂತೆ ಆಗಬೇಕು.


ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.


ಸಮುವೇಲನು ಇಸ್ರಯೇಲರೆಲ್ಲರಿಗೆ, “ನೋಡಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ, ನಿಮಗೊಬ್ಬ ಅರಸನನ್ನು ನೇಮಿಸಿದೆ.


ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಜೋರ್ಡನಿಗೆ ಬಂದಾಗ ಯೆಹೂದಕುಲದವರು ಅವನನ್ನು ಸ್ವಾಗತಿಸುವುದಕ್ಕೂ ಜೋರ್ಡನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.


ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು