Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:2 - ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಅವನು, “ಇಸ್ರಯೇಲರೆಲ್ಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತು ಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಸಂಧಾನ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಅವನು - ಎಲ್ಲಾ ಇಸ್ರಾಯೇಲ್ಯರನ್ನು ಅವಮಾನಪಡಿಸುವದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಅಮ್ಮೋನಿಯನಾದ ನಾಹಾಷನು, “ನಾನು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕಿದಾಗ ಮಾತ್ರ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆಗ ಇಸ್ರೇಲರಿಗೆಲ್ಲಾ ಅವಮಾನವಾಗುವುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:2
11 ತಿಳಿವುಗಳ ಹೋಲಿಕೆ  

ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.


“ಸುನ್ನತಿ ಇಲ್ಲದವರಿಗೆ ನಮ್ಮ ತಂಗಿಯನ್ನು ಕೊಡುವುದಕ್ಕೆ ಆಗುವುದಿಲ್ಲ. ಹಾಗೆ ಕೊಡುವುದು ನಮಗೆ ಅವಮಾನಕರ.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.


ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.


ಅಸ್ಸೀರಿಯದ ಅರಸನಾದ ನನ್ನ ಮಾತನ್ನು ಕೇಳಿ; ನನ್ನೊಡನೆ ಒಪ್ಪಂದಮಾಡಿಕೊಂಡು ನನ್ನ ಆಶ್ರಯವನ್ನು ಸೇರಿರಿ, ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗು ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನೇ ಕುಡಿಯುವನು.


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಸರ್ವೆಶ್ವರ ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.


ಪರರು ನಮ್ಮನು ಜರೆಯುವಂತೆ ಮಾಡಿರುವೆ I ನೆರೆಯವರ ಪರಿಹಾಸ್ಯಕ್ಕೆ ಗುರಿಪಡಿಸಿರುವೆ II


ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಸಂತೋಷಭರಿತರಾದರು. ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮ್ಮ ಇಚ್ಛೆಯ ಪ್ರಕಾರ ಮಾಡಬಹುದು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು