Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:4 - ಕನ್ನಡ ಸತ್ಯವೇದವು C.L. Bible (BSI)

4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಿದರು. ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಲು ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:4
15 ತಿಳಿವುಗಳ ಹೋಲಿಕೆ  

ಸೌಲನೂ ಗಿಬೆಯದಲ್ಲಿದ್ದ ತನ್ನ ಮನೆಗೆ ಹೋದನು. ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲೇ ಹೋದರು.


ಸರ್ವೇಶ್ವರನ ದೂತನು ಹೇಳಿದ ಈ ಮಾತುಗಳನ್ನು ಕೇಳಿ ಇಸ್ರಯೇಲರೆಲ್ಲರು ಗಟ್ಟಿಯಾಗಿ ಅತ್ತರು.


ದುಃಖ ತಾಳಲಾಗದೆ ದೀರ್ಘಕಾಲ ಅತ್ತು ಗೋಳಾಡಿದರು.


ಅನಂತರ ಸಮುವೇಲನು ರಾಮಾಕ್ಕೆ ಹೋದನು; ಇತ್ತ ಸೌಲನು ತನ್ನ ಊರಾದ ಗಿಬೆಯದಲ್ಲಿದ್ದ ಮನೆಗೆ ತೆರಳಿದನು.


ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು ಗಟ್ಟಿಯಾಗಿ ಅಳುತ್ತಾ


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳಿದುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರು ಇದ್ದರು.


“ಅಪ್ಪಾ, ನಿಮ್ಮಲ್ಲಿ ಒಂದೇ ಆಶೀರ್ವಾದ ಮಾತ್ರ ಇತ್ತೋ? ನನ್ನನ್ನು, ನನ್ನನ್ನು ಕೂಡ ಆಶೀರ್ವಾದ ಮಾಡಪ್ಪಾ,” ಎಂದು ಗೋಳಾಡುತ್ತಾ ಅತ್ತನು.


(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.


ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ಅವರು ಗಿಬೇಯದ ಶೇಮಾನ ಮಕ್ಕಳಾದ ಅಹೀಯೆಜೆರ್ ಮತ್ತು ಯೋವಾಷ ಎಂಬವರ ನೇತೃತ್ವದಲ್ಲಿ ಇದ್ದರು. ಆ ಸೈನಿಕರ ಹೆಸರುಗಳು :- ಯೇಜೀಯೇಲ್ ಮತ್ತು ಪೆಲೆಟ - ಅಜ್ಮಾವೆತನ ಮಕ್ಕಳು. ಯೇಹು ಮತ್ತು ಬೆರಾಕ - ಅನತೋತ ಊರಿನವರು. ಇಷ್ಮಾಯ - ಗಿಬ್ಯೋನಿನವನು; ಪ್ರಸಿದ್ಧನಾದ ಸೈನಿಕ, ‘ಮೂವತ್ತು ಪ್ರಮುಖರ’ ಪಟಾಲಮಿನಲ್ಲಿ ಒಬ್ಬ. ಯೆರೆಮೀಯ, ಯಹಜೀಯೇಲ್, ಯೋಹಾನಾನ್, ಯೋಜಾಬಾದ್ - ಗೆದೇರಾ ಊರಿನವರು. ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯ - ಇವರು ಹರೀಫ್ಯದವರು. ಎಲ್ಕಾನ, ಇಷೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಬಮ - ಇವರು ಕೋರಹನ ಗೋತ್ರದವರು. ಯೋವೇಲ ಮತ್ತು ಜೆಬದ್ಯ - ಗೆದೋರಿನ ಯೆರೋಹಾಮನ ಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು