Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:11 - ಕನ್ನಡ ಸತ್ಯವೇದವು C.L. Bible (BSI)

11 ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದ್ದರಿಂದ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ ಮತ್ತು ಸಮುವೇಲ ಎಂಬವರನ್ನು ಕಳುಹಿಸಿದನು. ನಿಮ್ಮನ್ನು ಸುತ್ತುವರಿದಿದ್ದ ಶತ್ರುಗಳಿಂದ ಯೆಹೋವನು ರಕ್ಷಿಸಿದನು. ನೀವು ಸುರಕ್ಷಿತವಾಗಿ ವಾಸಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:11
13 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಅವನು, “ಬಾಳನು ತನ್ನ ಬಲಿಪೀಠವನ್ನು ಕೆಡವಿದವನೊಡನೆ ತಾನೇ ವ್ಯಾಜ್ಯ ಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ‘ಯೆರುಬ್ಬಾಳ’ ಎಂದು ಹೆಸರಾಯಿತು.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಸರ್ವೇಶ್ವರ ಅವನನ್ನು ದಿಟ್ಟಿಸಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು,” ಎಂದು ಹೇಳಿದರು.


ಫಿಲಿಷ್ಟಿಯರು ಸೋತುಹೋದುದರಿಂದ ಮತ್ತೆ ಇಸ್ರಯೇಲರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಹಸ್ತ ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಸ್ಮರಿಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.


ಯೋವಾಷನ ಮಗ ‘ಯೆರುಬ್ಬಾಳ’ನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.


ಯೋವಾಷನು ತನಗೆ ವಿರುದ್ಧವಾಗಿ ನಿಂತವರೆಲ್ಲರಿಗೆ, “ಬಾಳನ ಪರ ನೀವು ವ್ಯಾಜ್ಯಮಾಡಬೇಕೆ? ನೀವು ಅವನನ್ನು ರಕ್ಷಿಸಬೇಕೇ? ಅವನಿಗಾಗಿ ವ್ಯಾಜ್ಯಮಾಡುವವರು ಬೆಳಗಾಗುವಷ್ಟರಲ್ಲಿ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ,” ಎಂದನು.


‘ಯೆರುಬ್ಬಾಳ’ ಎನಿಸಿಕೊಂಡ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.


ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.


ಅವನ ಮುಖಾಂತರವಾಗಿ ಅವರು ಸಿರಿಯಾದವರ ಕೈಯಿಂದ ಬಿಡುಗಡೆಯಾಗಿ, ಮುಂದಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಉಲಾಮ್‍ಗೆ ಬಿದಾನ್ ಎಂಬ ಒಬ್ಬ ಮಗನಿದ್ದ. ಇವರೆಲ್ಲರೂ ಮಾಕೀರನ ಮಗನೂ ಮನಸ್ಸೆಯ ಮೊಮ್ಮಗನೂ ಆದ ಗಿಲ್ಯಾದನ ವಂಶಜರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು