Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:14 - ಕನ್ನಡ ಸತ್ಯವೇದವು C.L. Bible (BSI)

14 ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೆ ವಿಧೇಯರಾಗಿ ಅವರನ್ನೇ ಪೂಜಿಸಿರಿ; ಅವರ ಮಾತನ್ನು ತಪ್ಪದೆ ಪಾಲಿಸುತ್ತಾ ಅವರನ್ನೇ ಹೊಂದಿಕೊಂಡಿರಿ. ಹೀಗೆ ಮಾಡಿದರೆ ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ವಿಧೇಯರಾಗಿ ಆತನನ್ನು ಸೇವಿಸುತ್ತಾ ತಪ್ಪದೆ ಆತನ ಮಾತು ಕೇಳುವವರಾಗಿ ಆತನನ್ನೇ ಹೊಂದಿಕೊಂಡಿರುವದಾದರೆ ಎಷ್ಟೋ ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಿರಂತರವಾಗಿ ರಕ್ಷಿಸುತ್ತಾನೆ. ಆದರೆ ನೀವು ಈ ಕಾರ್ಯಗಳನ್ನು ಮಾಡಿದರೆ ಮಾತ್ರ ದೇವರು ನಿಮ್ಮನ್ನು ರಕ್ಷಿಸುತ್ತಾನೆ: ನೀವು ಯೆಹೋವನನ್ನು ಗೌರವಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನ ಆಜ್ಞೆಗಳನ್ನು ವಿರೋಧಿಸಬಾರದು. ನಿಮ್ಮ ದೇವರಾದ ಯೆಹೋವನ ಮಾರ್ಗವನ್ನು ನೀವು ಮತ್ತು ನಿಮ್ಮನ್ನು ಆಳುವ ರಾಜನು ಅನುಸರಿಸಬೇಕು. ನೀವು ಈ ಕಾರ್ಯಗಳನ್ನು ಮಾಡಿದಾಗ ದೇವರು ನಿಮ್ಮನ್ನು ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:14
11 ತಿಳಿವುಗಳ ಹೋಲಿಕೆ  

“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ನೀವು ಅವರನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವರು,” ಎಂದನು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ಕಾಳ ರಾತ್ರಿಯಾಯಿತು ಪ್ರಭು ಕಳಿಸಲು ಕತ್ತಲನು I ಈಜಿಪ್ಟರಾದರೊ ಇದಿರಿಸಿದರು ಆತನ ಮಾತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು