Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸಮುವೇಲನು, “ಭಯಪಡಬೇಡಿ. ಅದೇನೋ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಸಮುಯೇಲನು ಜನರಿಗೆ, “ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ. ಆದರೂ ಯೆಹೋವ ದೇವರನ್ನು ಬಿಟ್ಟು ತಿರುಗದೆ, ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರನ್ನು ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:20
15 ತಿಳಿವುಗಳ ಹೋಲಿಕೆ  

ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II


ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು II


ಮೋಶೆಯ ಧರ್ಮಶಾಸ್ತ್ರವನ್ನೂ ಎಲ್ಲಾ ವಿಧಿಗಳನ್ನೂ ಕೈಗೊಳ್ಳುವುದರಲ್ಲಿ ಸ್ಥಿರಚಿತ್ತದಿಂದಿರಿ. ಎಡಕ್ಕಾಗಲಿ ಬಲಕ್ಕಾಗಲಿ ಓರೆಯಾಗಬೇಡಿ.


ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.


ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನೊಬ್ಬನನ್ನೇ ಆರಾಧಿಸಬೇಕು. ಆಗ ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವೆನು. ನಿಮ್ಮೊಳಗೆ ಯಾವ ವ್ಯಾಧಿಯೂ ಇರದಂತೆ ಮಾಡುವೆನು.


ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು