Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಯನ್ನು ಸಲ್ಲಿಸುವುದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟೆ. ಆದುದರಿಂದ ದಹನಬಲಿಯನ್ನು ಸಮರ್ಪಿಸುವುದಕ್ಕೆ ನಾನೇ ಮುಂದಾದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಯೆಹೋವನಿಗೆ ಶಾಂತ್ಯರ್ಪಣೆಯನ್ನು ಸಲ್ಲಿಸುವದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಮುಂಗೊಂಡೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಇಲ್ಲಿಗೆ ಬಂದು ಗಿಲ್ಗಾಲಿನಲ್ಲಿ ನನ್ನ ಮೇಲೆ ಆಕ್ರಮಣ ಮಾಡುತ್ತಾರೆ. ನಮಗೆ ಸಹಾಯ ಮಾಡುವಂತೆ ನಾನು ದೇವರಲ್ಲಿ ಇನ್ನೂ ಪ್ರಾರ್ಥಿಸಿಲ್ಲ. ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ಸರ್ವಾಂಗಹೋಮವನ್ನು ಅರ್ಪಿಸಿದೆನು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:12
9 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.


ಸಮುವೇಲನು, ಅವನನ್ನು ನೋಡಿ, “ಇದೇನು ನೀನು ಮಾಡಿದ್ದು?” ಎಂದು ಕೇಳಿದನು. ಅವನು, “ಜನರು ಚದರಿಹೋಗುವುದನ್ನು, ನೀವು ನಿಯಮಿತಕಾಲಕ್ಕೆ ಬಾರದಿರುವುದನ್ನು ಹಾಗು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನು ನೋಡಿದೆ;


ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.


ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು