Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:19 - ಕನ್ನಡ ಸತ್ಯವೇದವು C.L. Bible (BSI)

19 ಹಿಬ್ರಿಯರು ಈಟಿಕತ್ತಿಗಳನ್ನು ಮಾಡಿಸಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆ ಇದ್ದುದರಿಂದ ಇಸ್ರಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕಬ್ಬಿಣದಿಂದ ಆಯುಧಗಳನ್ನು ತಯಾರಿಸಲು ಇಸ್ರೇಲರಿಗೆ ಗೊತ್ತಿರಲಿಲ್ಲ. ಇಸ್ರೇಲಿನಲ್ಲಿ ಯಾವ ಕಮ್ಮಾರರೂ ಇರಲಿಲ್ಲ. ಇಸ್ರೇಲರು ಕಬ್ಬಿಣದಿಂದ ಕತ್ತಿಗಳನ್ನು ಮತ್ತು ಈಟಿಗಳನ್ನು ತಯಾರಿಸಬಹುದೆಂಬ ಭೀತಿಯು ಫಿಲಿಷ್ಟಿಯರಿಗೆ ಇದ್ದಕಾರಣ ಅವರು ಇಸ್ರೇಲರಿಗೆ ಕಬ್ಬಿಣದಿಂದ ತಯಾರಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಹಿಬ್ರಿಯರು ತಮಗೆ ಖಡ್ಗವನ್ನಾದರೂ ಈಟಿಯನ್ನಾದರೂ ಮಾಡಿಕೊಳ್ಳಬಾರದು,” ಎಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ, ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:19
6 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.


ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.


ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.


(ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹಣಿಸುವುದಕ್ಕಾಗಿ ಫಿಲಿಷ್ಟಿಯರ ಬಳಿಗೆ ಹೋಗಬೇಕಾಗಿತ್ತು.


ಅರಸ ಯೆಕೋನ್ಯನು, ರಾಜಮಾತೆಯು, ಕಂಚುಕಿಗಳು, ಜುದೇಯದ ಮತ್ತು ಜೆರುಸಲೇಮಿನ ಪದಾಧಿಕಾರಿಗಳು, ಶಿಲ್ಪಿಗಳು, ಕಮ್ಮಾರರು, ಇವರೆಲ್ಲರು ಜೆರುಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು