Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:22 - ಕನ್ನಡ ಸತ್ಯವೇದವು C.L. Bible (BSI)

22 ಹೀಗಿದ್ದುದರಿಂದ ಯುದ್ಧ ಪ್ರಾರಂಬಿಸಿದಾಗ ಸೌಲ ಯೋನಾತಾನರ ಹೊರತು, ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಭರ್ಜಿಯಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಿರುವದರಿಂದ ಯುದ್ಧಪ್ರಾರಂಭಿಸಿದಾಗ ಸೌಲ ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಯುದ್ಧದ ದಿನ ಸೌಲನ ಬಳಿಯಿದ್ದ ಸೈನಿಕರಲ್ಲಿ ಯಾರ ಹತ್ತಿರವೂ ಕತ್ತಿಯಾಗಲಿ ಈಟಿಯಾಗಲಿ ಇರಲಿಲ್ಲ. ಸೌಲ ಮತ್ತು ಅವನ ಮಗನಾದ ಯೋನಾತಾನನ ಹತ್ತಿರ ಮಾತ್ರ ಕಬ್ಬಿಣದ ಆಯುಧಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯುದ್ಧದ ದಿವಸದಲ್ಲಿ ಸೌಲ ಯೋನಾತಾನರ ಜೊತೆಯಲ್ಲಿದ್ದ ಸಮಸ್ತ ಜನರಲ್ಲಿ ಒಬ್ಬನ ಕೈಯಲ್ಲಾದರೂ ಖಡ್ಗವಾಗಲಿ, ಈಟಿಯಾಗಲಿ ಇರಲಿಲ್ಲ. ಆದರೆ ಸೌಲನಿಗೂ, ಅವನ ಪುತ್ರನಾದ ಯೋನಾತಾನನಿಗೂ ಮಾತ್ರವೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:22
7 ತಿಳಿವುಗಳ ಹೋಲಿಕೆ  

ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು.


ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು.


ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕಾಗಿ ಅವರಲ್ಲಿ ಅರ ಮಾತ್ರ ಇತ್ತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು