Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:3 - ಕನ್ನಡ ಸತ್ಯವೇದವು C.L. Bible (BSI)

3 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೇರೆ ಇಸ್ರಾಯೇಲ್ಯರನ್ನು ಅವರವರ ಮನೆಗಳಿಗೆ ಕಳುಹಿಸಿದನು. ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಠಾಣವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಈ ಸಂಗತಿಯು ಎಲ್ಲಾ ಇಬ್ರಿಯರಿಗೂ ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದ್ದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:3
12 ತಿಳಿವುಗಳ ಹೋಲಿಕೆ  

ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.


ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು.


ಆಗ ಗಿದ್ಯೋನನು ಸರ್ವೇಶ್ವರಾತ್ಮಭರಿತನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.


ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು.


ಕಣಿವೆಯನ್ನು ದಾಟಿದೆ; ‘ಗೆಬಾದಲ್ಲಿ ದಂಡಿಳಿಸೋಣ’ ಎಂದು ಹೇಳುತ್ತಿದೆ. ರಾಮಾ ಜನತೆ ನಡುಗುತ್ತಿದೆ, ಸೌಲನ ಗಿಬೆಯದ ಜನ ಪಲಾಯನ ಗೈದಿದೆ.


ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಕೂಡಲೆ ತುತೂರಿಯನ್ನು ಊದಿಸಿದನು. ಆಗ ಜನರು ಇಸ್ರಯೆಲರನ್ನು ಹಿಂದಟ್ಟದೆ ಬಿಟ್ಟರು. ಯುದ್ಧವು ನಿಂತುಹೋಯಿತು.


ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.


ಹಾಗೂ ಬೆನ್ಯಾಮೀನ್ ಕುಲದಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು