Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:4 - ಕನ್ನಡ ಸತ್ಯವೇದವು C.L. Bible (BSI)

4 ಸೌಲನು ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದ್ದರಿಂದ, ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಯೇಲರು ತಿಳಿದು, ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೌಲನು ಫಿಲಿಷ್ಟಿಯರ ಠಾಣವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲ್ಯರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರೆಲ್ಲರೂ ಈ ಸುದ್ದಿಯನ್ನು ಕೇಳಿ, “ಸೌಲನು ಫಿಲಿಷ್ಟಿಯರ ನಾಯಕನನ್ನು ಕೊಂದನು. ಈಗ ಫಿಲಿಷ್ಟಿಯರು ಇಸ್ರೇಲರನ್ನು ನಿಜವಾಗಿಯೂ ದ್ವೇಷಿಸುತ್ತಾರೆ” ಎಂದು ಹೇಳಿದರು. ಇಸ್ರೇಲರೆಲ್ಲ ಗಿಲ್ಗಾಲಿನಲ್ಲಿ ಸೌಲನನ್ನು ಜೊತೆಸೇರಲು ಕರೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ಸೌಲನು ನಾಶಮಾಡಿದ್ದರಿಂದ, ಇಸ್ರಾಯೇಲರು ಈಗ ಫಿಲಿಷ್ಟಿಯರಿಗೆ ಅಸಹ್ಯಕರ ಶತ್ರುವಾದರು,” ಎಂಬ ವರ್ತಮಾನವನ್ನು ಸಮಸ್ತ ಇಸ್ರಾಯೇಲರು ಕೇಳಿದರು. ಮತ್ತು ಗಿಲ್ಗಾಲಿಗೆ ಬಂದು ಸೌಲನನ್ನು ಸೇರಿಕೊಳ್ಳಲು ಜನರನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:4
9 ತಿಳಿವುಗಳ ಹೋಲಿಕೆ  

ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.


ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದ ನಂತರ ನಾನು ದಹನಬಲಿಗಳನ್ನೂ ಶಾಂತಿಸಮಾಧಾನಬಲಿಗಳನ್ನೂ ಸಮರ್ಪಿಸುವುದಕ್ಕಾಗಿ ಅಲ್ಲಿಗೆ ಬಂದು ನೀನು ಮಾಡಬೇಕಾದುದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು,” ಎಂದು ಹೇಳಿದನು.


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ.


'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.


ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


“ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು