Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:6 - ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರು ತಾವು ತೊಂದರೆಗೆ ಒಳಗಾಗಿರುವುದನ್ನೂ ಇಕ್ಕಟ್ಟಿನಲ್ಲಿ ಸಿಕ್ಕಿಬಿದ್ದಿರುವುದನ್ನೂ ತಿಳಿದುಕೊಂಡರು. ಅವರು ಗವಿಗಳಲ್ಲಿ ಮತ್ತು ಬಂಡೆಗಲ್ಲುಗಳ ಸಂಧಿಗಳಲ್ಲಿ ಅಡಗಿಕೊಳ್ಳಲು ಓಡಿಹೋದರು. ಅವರು ಬಂಡೆಗಳ ಮಧ್ಯದಲ್ಲಿಯೂ ಬಾವಿಗಳಲ್ಲಿಯೂ ಮತ್ತು ನೆಲದ ಕುಳಿಗಳಲ್ಲಿಯೂ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:6
18 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.


ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು.


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ.


ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.


ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕಾಗಿ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.


ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ಒಡೆಯಾ, ಆಲಿಸಬೇಕು; ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಮರುಭೂಮಿಯ ದಕ್ಷಿಣದಲ್ಲಿ ಇರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.


ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಹಿಬ್ರಿಯರು ತಾವು ಅಡಗಿಕೊಂಡಿದ್ದ ಕಿಂಡಿಗಳಿಂದ ಹೊರಗೆ ಬರುತ್ತಲಿದ್ದಾರೆ,” ಎಂದು ತಮ್ಮೊಳಗೆ ಮಾತಾಡಿಕೊಂಡರು.


ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣ ಅಗ್ನಿಗೆ ಆಹುತಿ ಆದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತ ಆಯಿತೆಂದು ಕಳವಳಗೊಂಡರು.


ಇದಲ್ಲದೆ ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಯೇಲರು ಬಹಳ ಕಷ್ಟಕ್ಕೀಡಾದರು.


ಆಯಿಯ ಜನರು ಹಿಂದಿರುಗಿ ನೋಡಿದಾಗ ನಗರದ ಹೊಗೆ ಆಕಾಶಕ್ಕೆ ಏರುತ್ತಿತ್ತು. ಯಾವ ಮಾರ್ಗದಿಂದಲೂ ಅವರಿಗೆ ತಪ್ಪಿಸಿಕೊಳ್ಳಲು ಆಗಲಿಲ್ಲ. ಏಕೆಂದರೆ ಅರಣ್ಯದ ಕಡೆಗೆ ಓಡಿಹೋಗುತ್ತಿದ್ದ ಇಸ್ರಯೇಲರು ಹಿಂದಟ್ಟಿ ಬರುವವರ ಕಡೆಗೆ ತಿರುಗಿದ್ದರು.


ಇಸ್ರಯೇಲರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆಂಬುದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರುಗಳು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟರು. ಇದನ್ನು ತಿಳಿದ ಇಸ್ರಯೇಲರು ಬಹಳವಾಗಿ ಭಯಪಟ್ಟರು.


ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಎಣಿಸಿದಾಗ ಆರುನೂರು ಮಂದಿಯಿದ್ದರು.


ಎಫ್ರಯಿಮ್ ಪರ್ವತಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ಸಮಾಚಾರ ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.


“ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


“ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.


ಇಸ್ರಯೇಲ್ ಯೋಧರು ಸೋತರು; ಸೌಲನೂ ಅವನ ಮಕ್ಕಳೂ ಸತ್ತರು ಎಂಬ ಸಮಾಚಾರವನ್ನು ಕಣಿವೆಯ ಆಚೆಯಲ್ಲೂ ಜೋರ್ಡನಿನ ಆಚೆಯಲ್ಲೂ ವಾಸವಾಗಿದ್ದ ಇಸ್ರಯೇಲರು ಕೇಳಿ ತಮ್ಮ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು