Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ಸೌಲನು ಜನರಿಂದ ದಹನಬಲಿಗೆ ಹಾಗು ಶಾಂತಿಸಮಾಧಾನ ಬಲಿಗೆ ಬೇಕಾದದ್ದನ್ನು ತರಿಸಿ ದಹನಬಲಿಯನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಸೌಲನು, “ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದವುಗಳನ್ನು ತನ್ನಿ” ಎಂದು ಹೇಳಿದನು. ಬಳಿಕ ಸೌಲನು ಸರ್ವಾಂಗಹೋಮವನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಸೌಲನು, “ದಹನಬಲಿಯನ್ನೂ, ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:9
13 ತಿಳಿವುಗಳ ಹೋಲಿಕೆ  

ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,


ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


“ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.


ಅನಂತರ ಸೌಲನು ಅಹೀಯನಿಗೆ, “’ಏಫೋದ’ನ್ನು ತೆಗೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. (ಆ ದಿನದಂದು ಅಹೀಯನು ಇಸ್ರಯೇಲರ ಮುಂದೆ ಏಫೋದನ್ನು ಹೊತ್ತು ನಡೆಯುತ್ತಿದ್ದನು).


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು