Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:12 - ಕನ್ನಡ ಸತ್ಯವೇದವು C.L. Bible (BSI)

12 ಆ ಫಿಲಿಷ್ಟಿಯರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿ; ನಿಮಗೆ ತೋರಿಸಬೇಕಾದದ್ದೊಂದಿದೆ,” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಸರ್ವೇಶ್ವರ ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ತೋರಿಸಿಬೇಕಾದ ಕಾರ್ಯ ಬಂದಿದೆ” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ - ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯತೋರಿಸಿಕೊಡುತ್ತೇವೆ ಅನ್ನಲು ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಕೋಟೆಯಲ್ಲಿದ್ದ ಫಿಲಿಷ್ಟಿಯರು ಯೋನಾತಾನ ಮತ್ತು ಅವನ ಸಹಾಯಕನಿಗೆ, “ನಮ್ಮ ಹತ್ತಿರಕ್ಕೆ ಬನ್ನಿ. ನಾವು ನಿಮಗೆ ಒಂದು ಪಾಠ ಕಲಿಸುತ್ತೇವೆ” ಎಂದು ಕೂಗಿ ಹೇಳಿದರು. ಯೋನಾತಾನನು ತನ್ನ ಸಹಾಯಕನಿಗೆ, “ಬೆಟ್ಟದ ಮೇಲಿನವರೆಗೆ ನನ್ನನ್ನು ಹಿಂಬಾಲಿಸು. ಯೆಹೋವನು ಇಸ್ರೇಲರ ವಶಕ್ಕೆ ಫಿಲಿಷ್ಟಿಯರನ್ನು ಒಪ್ಪಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಠಾಣ್ಯಕ್ಕೆ ಮನುಷ್ಯರು ಯೋನಾತಾನನಿಗೂ, ಅವನ ಆಯುಧ ಹೊರುವವನಿಗೂ, “ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ, ನಿಮಗೆ ಪಾಠ ಕಲಿಸುತ್ತೇನೆ,” ಎಂದು ಕೂಗಿದರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ನನ್ನ ಹಿಂದೆ ಏರಿ ಬಾ. ಏಕೆಂದರೆ ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:12
13 ತಿಳಿವುಗಳ ಹೋಲಿಕೆ  

ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.


ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಯೇಲರ ಅರಸನೂ ಆದ ಯೋವಾಷನ ಬಳಿಗೆ ದೂತರನ್ನು ಕಳುಹಿಸಿದನು. ಅವನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿಸಿದನು.


ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿ’ ಎಂದು ಕರೆದರೆ ಸರ್ವೇಶ್ವರ ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾರೆಂಬುದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ,” ಎಂದನು.


ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಸರ್ವೇಶ್ವರನಿಗೆ ಅಡ್ಡಬಿದ್ದು ಇಸ್ರಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು, ಅವರಿಗೆ, “ಏಳಿ, ಸರ್ವೇಶ್ವರ ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ,” ಎಂದನು.


ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.


ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ.


“ನಾನು ಇಂದು ಈ ಊರಿನ ಬುಗ್ಗೆಯ ಬಳಿಗೆ ಬಂದೆ. ‘ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ. ನೀವು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾದರೆ


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಮೊಣಕಾಲನ್ನು ಹಾಗು ಕೈಗಳನ್ನು ಊರುತ್ತಾ ಕಣಿವೆಯಿಂದ ಮೇಲೆ ಬಂದರು. ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕೆ ಉರುಳಿಸುತ್ತಾ ಹೋದನು; ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ನಡೆದನು.


“ಇದು ಇಸ್ರಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿರುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು