Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:15 - ಕನ್ನಡ ಸತ್ಯವೇದವು C.L. Bible (BSI)

15 ಇದರಿಂದಾಗಿ ಪಾಳೆಯದಲ್ಲಿದ್ದವರು, ಕಾವಲುಗಾರರಾಗಿ ಠಾಣದಲ್ಲಿದ್ದವರು, ಸುಲಿಗೆಗಾಗಿ ಹೊರಗೆ ಹೋಗಿದ್ದವರು, ಹಾಗು ಉಳಿದ ಎಲ್ಲಾ ಜನರು ಭಯದಿಂದ ನಡುಗತೊಡಗಿದರು. ಇದಲ್ಲದೆ, ದೇವರು ಭೂಕಂಪವನ್ನುಂಟು ಮಾಡಿದರು. ಈ ಕಾರಣ ಜನರಲ್ಲಿ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದರಿಂದ ಪಾಳೆಯದಲ್ಲಿದ್ದವರೂ ಕಾವಲುಗಾರರಾಗಿ ಠಾಣದಲ್ಲಿದ್ದವರೂ ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ ಉಳಿದ ಎಲ್ಲಾ ಜನರೂ ಭಯದಿಂದ ನಡುಗಹತ್ತಿದರು. ಇದಲ್ಲದೆ ದೇವರು ಭೂಕಂಪವನ್ನುಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:15
18 ತಿಳಿವುಗಳ ಹೋಲಿಕೆ  

ಸುಲಿಗೆ ಮಾಡುವುದಕ್ಕಾಗಿ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟುಬಂದವು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‍ನಾಡಿಗೆ,


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.


ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಸಜ್ಜನರ ಸಂಗದೊಳು ದೇವನಿರಲು I ದುರ್ಜನರಿದೋ ದಿಗ್ಭ್ರಾಂತರಾಗುವರು II


ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.


ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಗಲಿಬಿಲಿಗೊಂಡು ಚೀರುತ್ತಾ ಓಡಿಹೋಗಲು ಆರಂಭಿಸಿದರು.


“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.


ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


ಇನ್ನೊಂದು ಬೇತ್‍ಹೋರೋನಿನ ಕಡೆಗೆ, ಮತ್ತೊಂದು ಜೆಬೋಯೀಮ್ ಕಣಿವೆಯೂ ಅದರ ಕೆಳಗಿರುವ ಅರಣ್ಯವೂ ಕಾಣಿಸುವ ಸ್ಥಳಕ್ಕೆ ಹೋದವು.


ಹೀಗೆ ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂಮಿಯಲ್ಲೇ ಸುಮಾರು ಇಪ್ಪತ್ತು ಮಂದಿಯನ್ನು ಅವರು ವಧಿಸಿದರು.


ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಹೀಗೆ ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು