Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:37 - ಕನ್ನಡ ಸತ್ಯವೇದವು C.L. Bible (BSI)

37 ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೇ? ನೀವು ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ಕೇಳಿಕೊಂಡನು. ಆದರೆ ಸರ್ವೇಶ್ವರ ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿಕೊಂಡರೂ ದೇವರು ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಿಕೊಂಡರೂ ಆತನು ಅವನಿಗೆ ಆ ದಿವಸ ಉತ್ತರ ಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆದ್ದರಿಂದ ಸೌಲನು ದೇವರನ್ನು, “ನಾವು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ಆ ದಿನ ಸೌಲನಿಗೆ ಉತ್ತರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅದಕ್ಕೆ ಸೌಲನು, “ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀವು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ದೇವರ ಆಲೋಚನೆಯನ್ನು ಕೇಳಿದನು. ಆದರೆ ಅವರು ಅವನಿಗೆ ಆ ದಿವಸದಲ್ಲಿ ಉತ್ತರ ಕೊಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:37
15 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.


ಮಾತ್ರವಲ್ಲ, “ಸರ್ವೇಶ್ವರನ ಸನ್ನಿಧಿಯಲ್ಲಿ ಈಗಲೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಬೇಡಿಕೊಂಡನು.


ದಾವೀದನು ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದಾಗ ಅವರು, “ನೀನು ನೆಟ್ಟಗೆ ಹೋಗಿ ಅವರ ಮೇಲೆ ದಾಳಿ ಮಾಡಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು.


ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.


“ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.


ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕ ಸೇವೆಮಾಡುತ್ತಿದ್ದನು. ಇಂತಿರಲು ಇಸ್ರಯೇಲರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ” ಎಂದು ಸರ್ವೇಶ್ವರನನ್ನು ಕೇಳಿದರು. ಸರ್ವೇಶ್ವರನು ಅವರಿಗೆ, “ಹೋಗಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು,” ಎಂದರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.


ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು