Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:41 - ಕನ್ನಡ ಸತ್ಯವೇದವು C.L. Bible (BSI)

41 ಅನಂತರ ಸೌಲನು, “ಇಸ್ರಯೇಲ್ ದೇವರೇ, ಸತ್ಯವನ್ನು ತಿಳಿಸಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿ ಚೀಟುಹಾಕಿದನು. ಅದು ಅವನಿಗೂ ಯೋನಾತಾನನಿಗೂ ಬಂದಿತು. ಜನರು ಪಾರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅನಂತರ ಸೌಲನು, “ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು” ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅನಂತರ ಸೌಲನು - ಇಸ್ರಾಯೇಲ್ ದೇವರೇ ಸತ್ಯವನ್ನು ತಿಳಿಸು ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಲ್ಲಿ ಅದು ಅವನಿಗೂ ಯೋನಾತಾನನಿಗೂ ಬಂದಿತು; ಜನರು ಪಾರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆಗ ಸೌಲನು, “ಇಸ್ರೇಲಿನ ದೇವರಾದ ಯೆಹೋವನೇ, ನಾನು ನಿನ್ನ ಸೇವಕ. ಈ ದಿನ ನೀನು ನನಗೇಕೆ ಉತ್ತರಿಸಲಿಲ್ಲ? ನಾನಾಗಲಿ ನನ್ನ ಮಗನಾದ ಯೋನಾತಾನನಾಗಲಿ ಇಸ್ರೇಲರಾಗಲಿ ಪಾಪಮಾಡಿದ್ದರೆ ಅದನ್ನು ನಮಗೆ ತಿಳಿಸಿಕೊಡು” ಎಂದು ಪ್ರಾರ್ಥಿಸಿದನು. ಚೀಟುಹಾಕಿದಾಗ ಅದು ಸೌಲನಿಗೂ ಯೋನಾತಾನನಿಗೂ ಬಂದಿತು. ಜನರೆಲ್ಲಾ ಬಿಡುಗಡೆಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಸೌಲನು ಇಸ್ರಾಯೇಲರ ದೇವರಾದ ಯೆಹೋವ ದೇವರಿಗೆ, “ನೀವು ಪೂರ್ಣ ನಿರ್ಣಯವನ್ನು ದಯಪಾಲಿಸಿರಿ,” ಎಂದು ಹೇಳಿ ಚೀಟು ಹಾಕಿದನು. ಆಗ ಸೌಲನಿಗೂ ಯೋನಾತಾನನಿಗೂ ಚೀಟು ಬಂತು. ಆದರೆ ಜನರು ಪಾರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:41
9 ತಿಳಿವುಗಳ ಹೋಲಿಕೆ  

ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.


ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.


ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.


ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.


ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು,” ಎಂದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದರು.


ಸೌಲನು ಮತ್ತೆ, “ನಮ್ಮಿಬ್ಬರೊಳಗೆ ಚೀಟುಹಾಕಿ,” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು.


ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು