Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:12 - ಕನ್ನಡ ಸತ್ಯವೇದವು C.L. Bible (BSI)

12 ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವದಕ್ಕೆ ಹೊರಟಾಗ ಅವನಿಗೆ - ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನೆಂಬ ವರ್ತಮಾನವು ಬಂದದರಿಂದ ಸಮುವೇಲನು ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಮುಯೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಅವನಿಗೆ ಹೀಗೆ ಹೇಳಲಾಗಿತ್ತು, “ಸೌಲನು ತನ್ನ ನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲು ಕರ್ಮೆಲಿಗೆ ಹೋಗಿದ್ದಾನೆ. ನಂತರ ಅಲ್ಲಿಂದ ಮುಂದೆ ಹೋಗಿ ಗಿಲ್ಗಾಲಿಗೆ ಹೋಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:12
12 ತಿಳಿವುಗಳ ಹೋಲಿಕೆ  

ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.


ಕರ್ಮೆಲಿನಲ್ಲಿ ಸ್ವಂತ ಸೊತ್ತು ಪಡೆದಿದ್ದ ಒಬ್ಬ ಮನುಷ್ಯ ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ.


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ, ಎಲೀಯನು ಕರ್ಮೆಲಿನ ತುದಿಗೆ ಹೋಗಿ, ಅಲ್ಲಿ ನೆಲದ ಮೇಲೆ ಬಿದ್ದುಕೊಂಡು, ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.


ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಯನ್ನು ಸಲ್ಲಿಸುವುದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟೆ. ಆದುದರಿಂದ ದಹನಬಲಿಯನ್ನು ಸಮರ್ಪಿಸುವುದಕ್ಕೆ ನಾನೇ ಮುಂದಾದೆ,” ಎಂದನು.


ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಎಣಿಸಿದಾಗ ಆರುನೂರು ಮಂದಿಯಿದ್ದರು.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿಗಾಹಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆ ಜೆಸ್ಸೆಯನು ಹೇಳಿದವುಗಳನ್ನು ತೆಗೆದುಕೊಂಡು ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು. ಸೈನ್ಯಗಳು ಯುದ್ಧಘೋಷಣೆಗಳನ್ನು ಹಾಕುವ ಸಮಯ ಅದು.


ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,


ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು