Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:13 - ಕನ್ನಡ ಸತ್ಯವೇದವು C.L. Bible (BSI)

13 ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೌಲನು ಸಮುವೇಲನ ಹತ್ತಿರಕ್ಕೆ ಹೋಗಿ, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಯೆಹೋವನ ಆಜ್ಞೆಗಳನ್ನು ಪಾಲಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮುಯೇಲನು ಸೌಲನ ಬಳಿಗೆ ಬಂದಾಗ, ಸೌಲನು ಅವನಿಗೆ, “ನಿನಗೆ ಯೆಹೋವ ದೇವರ ಆಶೀರ್ವಾದವಾಗಲಿ; ನಾನು ಯೆಹೋವ ದೇವರ ಆಜ್ಞೆಯನ್ನು ಈಡೇರಿಸಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:13
17 ತಿಳಿವುಗಳ ಹೋಲಿಕೆ  

ಬೋವಜನು: “ಮಗಳೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ! ನೀನು ಬಡ ಯೌವನಸ್ಥನನ್ನಾಗಲೀ, ಸಿರಿವಂತ ಯೌವನಸ್ಥನನ್ನಾಗಲೀ ಅರಸಲಿಲ್ಲ. ನೀನು ನನಗೆ ತೋರಿದ ವಂಶ ಗೌರವವು ಇಲ್ಲಿಯವರೆಗೆ ನೀನು ಅತ್ತೆಗೆ ತೋರಿದ ಗೌರವಕ್ಕಿಂತಲೂ ಶ್ರೇಷ್ಠವಾದುದು.


ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.


ಆಕೆಯ ಕೈ ಕೆಲಸಕ್ಕೆ ತಕ್ಕ ಪ್ರತಿಫಲ ಲಭಿಸಲಿ; ಆಕೆಯ ಕಾರ್ಯಗಳೇ ಆಕೆಯನ್ನು ಪುರದ್ವಾರಗಳಲ್ಲಿ ಹೊಗಳಲಿ!


ಮೇಲಿಂದ ಮೇಲಕ್ಕೆ ದೃಷ್ಟಿಸಿ ನೋಡುವ, ಠೀವಿಯಿಂದ ಕಣ್ಣುರೆಪ್ಪೆಗಳನ್ನೇರಿಸುವ ಜನರುಂಟು.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಸೌಲನು ಹಾಗು ಇಸ್ರಯೇಲರು ಅಗಾಗನನ್ನು ಮಾತ್ರವಲ್ಲ, ಮೇಲ್ತರದ ಕುರಿದನಗಳನ್ನು, ಕುರಿಮರಿಗಳನ್ನು, ಕೊಬ್ಬಿದ ಪಶುಗಳನ್ನು ಹಾಗು ಶ್ರೇಷ್ಠವಾದ ಎಲ್ಲ ಪದಾರ್ಥಗಳನ್ನು ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲ ನಾಶಮಾಡಿಬಿಟ್ಟರು.


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು


ನಿನ್ನ ಬಾಯಿ ಅಲ್ಲ, ಬೇರೆಯವರು ಹೊಗಳಲಿ ನಿನ್ನ; ಆತ್ಮಸ್ತುತಿ ಸಲ್ಲ, ಅನ್ಯರು ಸ್ತುತಿಸಲಿ ನಿನ್ನ.


ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕಾಗಿ ಮುಂದೆ ಹೋದನು.


ಆಗ ಸೌಲನು ಸಮುವೇಲನಿಗೆ, “ಏನು? ನಾನು ಸರ್ವೇಶ್ವರನ ಮಾತನ್ನು ಕೇಳಲಿಲ್ಲವೇ? ಅವರು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದದುತಂದೆ.


ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮ ವಿಚಾರಕ್ಕಾಗಿ ದೂತರನ್ನು ಕಳುಹಿಸಿದ್ದನು. ದಣಿಯವರು ಬಂದವರನ್ನು ಚೆನ್ನಾಗಿ ಬೈದು ಕಳಿಸಿದರು.


ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ!


ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರಪಟ್ಟದ್ದರಿಂದ ಸರ್ವೇಶ್ವರನ ಆಶೀರ್ವಾದ ನಿಮ್ಮ ಮೇಲಿರಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು