Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:32 - ಕನ್ನಡ ಸತ್ಯವೇದವು C.L. Bible (BSI)

32 ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ತರ ಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಸಮುವೇಲನು, “ಅಮಾಲೇಕ್ಯರ ರಾಜನಾದ ಅಗಾಗನನ್ನು ನನ್ನ ಬಳಿಗೆ ಕರೆದುಕೊಂಡು ಬಾ” ಎಂದು ಹೇಳಿದನು. ಅಗಾಗನು ಸಮುವೇಲನ ಹತ್ತಿರಕ್ಕೆ ಬಂದನು. ಅಗಾಗನನ್ನು ಸರಪಣಿಗಳಿಂದ ಬಂಧಿಸಲಾಗಿತ್ತು. ಅಗಾಗನು, “ಅವನು ನನ್ನನ್ನು ನಿಜವಾಗಿಯೂ ಕೊಲ್ಲುವುದಿಲ್ಲ” ಎಂದು ಆಲೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:32
8 ತಿಳಿವುಗಳ ಹೋಲಿಕೆ  

ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು. ದಂಡನೆಯ ವರ್ಷವನ್ನು ಮೋವಾಬಿಗೆ ಖಂಡಿತ ಬರಮಾಡುವೆನು - ಇದು ಸರ್ವೇಶ್ವರನ ನುಡಿ.


ಆಗ ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲೇ ಹೋದನು. ಸೌಲನು ದೇವರನ್ನು ಆರಾಧಿಸಿದನು.


ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.


ಅನಂತರ ಯೆಹೋಶುವನು ಜನರಿಗೆ, “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿ,” ಎಂದನು.


ಗಿದ್ಯೋನನು ಕಾಡುಗೊಲ್ಲರ ಪ್ರದೇಶ ಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳಿದುಕೊಂಡಿದ್ದ ಆ ಪಾಳೆಯದ ಮೇಲೆ ದಾಳಿಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು