Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:19 - ಕನ್ನಡ ಸತ್ಯವೇದವು C.L. Bible (BSI)

19 ಕೂಡಲೆ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿ ಮೇಯಿಸುತ್ತಿರುವ ನಿನ್ನ ಮಗ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೌಲನು ಸಂದೇಶಕರ ಮೂಲಕ ಇಷಯನಿಗೆ, “ನಿನಗೆ ದಾವೀದನೆಂಬ ಮಗನಿದ್ದಾನೆ. ಅವನು ನಿನ್ನ ಕುರಿಗಳನ್ನು ಕಾಯುತ್ತಾನೆ. ಅವನನ್ನು ನನ್ನ ಬಳಿಗೆ ಕಳುಹಿಸು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ, “ಕುರಿಗಳ ಬಳಿಯಲ್ಲಿ ಇರುವ ನಿನ್ನ ಪುತ್ರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:19
12 ತಿಳಿವುಗಳ ಹೋಲಿಕೆ  

ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೆ ಬೆತ್ಲೆಹೇಮಿಗೆ ಹೋದನು.


ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು.


ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


ಕೂರಿಸುವನಾತ ಅವರನು ಅಧಿಪತಿಗಳ ನಡುವೆ I ತನ್ನ ಪ್ರಜೆಯನಾಳುವಾ ಅಧಿಪತಿಗಳ ನಡುವೆ II


ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.


ಜೆಸ್ಸೆಯನು ರೊಟ್ಟಿಯನ್ನು, ಒಂದು ಬುದ್ದಲಿ ದ್ರಾಕ್ಷಾರಸವನ್ನು ಹಾಗು ಒಂದು ಹೋತಮರಿಯನ್ನು ಕತ್ತೆಯ ಮೇಲೆ ಹೇರಿಸಿ, ತನ್ನ ಮಗ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು