Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:21 - ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿದನು, ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು; ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವದಕ್ಕೆ ನೇವಿುಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾವೀದನು ಸೌಲನ ಹತ್ತಿರಕ್ಕೆ ಹೋಗಿ, ಅವನ ಮುಂದೆ ನಿಂತನು. ಸೌಲನು ದಾವೀದನನ್ನು ಬಹಳ ಪ್ರೀತಿಸಿದನು. ದಾವೀದನು ಸೌಲನ ಆಯುಧಗಳನ್ನು ಹೊರುವ ಸಹಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹಾಗೆಯೇ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಇವನನ್ನು ಬಹಳವಾಗಿ ಮೆಚ್ಚಿದನು. ಅವನನ್ನು ತನ್ನ ಆಯುಧ ಹೊರುವವರಲ್ಲಿ ಒಬ್ಬನನ್ನಾಗಿ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:21
13 ತಿಳಿವುಗಳ ಹೋಲಿಕೆ  

ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ಈಜಿಪ್ಟ್ ದೇಶದ ಅರಸನಾದ ಫರೋಹನ ಆಸ್ಥಾನವನ್ನು ಸೇರಿದಾಗ ಜೋಸೆಫನಿಗೆ ಮೂವತ್ತು ವರ್ಷ ವಯಸ್ಸು. ಜೋಸೆಫನು ಫರೋಹನ ಸನ್ನಿಧಿಯಿಂದ ಹೊರಟು ಈಜಿಪ್ಟ್ ದೇಶದಲ್ಲೆಲ್ಲ ಸಂಚಾರ ಮಾಡಿದನು.


ನಂಬಬೇಡ ಅಧಿಕಾರಿಯನು I ನೆಚ್ಚಬೇಡ ನರಮಾನವನನು I ಉದ್ಧರಿಸಲು ಅಸಮರ್ಥನವನು II


ರಾಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು!


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಯೇಲರಿಗೆ ಆ ನಾಡನ್ನು ಸ್ವಾಧೀನಪಡಿಸುವನು; ಆದುದರಿಂದ ಅವನನ್ನು ಧೈರ್ಯಗೊಳಿಸು.


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


ತರುವಾಯ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಅಟ್ಟಿ, ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲೇ ಸೇವೆಮಾಡಲಿ,” ಎಂದು ತಿಳಿಸಿದನು.


ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೆ ಬೆತ್ಲೆಹೇಮಿಗೆ ಹೋದನು.


ದಾವೀದನು ಆ ಫಿಲಿಷ್ಟಿಯನೊಡನೆ ಯುದ್ಧಮಾಡಲು ಹೊರಟಿದ್ದನ್ನು ಸೌಲನು ನೋಡಿದನು. ತನ್ನ ಸೇನಾಪತಿಯಾದ ಅಬ್ನೇರನನ್ನು ಉದ್ದೇಶಿಸಿ, “ಅಬ್ನೇರನೇ, ಈ ತರುಣ ಯಾರ ಮಗ?” ಎಂದು ವಿಚಾರಿಸಿದನು. ಅದಕ್ಕೆ ಅಬ್ನೇರನು, “ಅರಸರೇ, ತಮ್ಮ ಜೀವದಾಣೆ, ನನಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟನು.


ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು