Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:35 - ಕನ್ನಡ ಸತ್ಯವೇದವು C.L. Bible (BSI)

35 ನಾನು ಒಡನೆ ಬೆನ್ನಟ್ಟಿ ಹೋಗುತ್ತಿದ್ದೆ; ಆ ಕಾಡುಮೃಗವನ್ನು ಹೊಡೆದು ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆ. ಅದು ಹಿಂದಿರುಗಿ ನನ್ನ ಮೇಲೆ ಬಿದ್ದಾಗ ಅದನ್ನು ಗಡ್ಡ ಹಿಡಿದು, ಬಡಿದು, ಕೊಂದುಹಾಕುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಾನು ಒಡನೇ ಬೆನ್ನಟ್ಟಿ, ಅದನ್ನು ಹೊಡೆದು, ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬೀಳಲು ಬಂದಾಗ ಅದರ ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಾನು ಒಡನೆ ಅದನ್ನು ಬೆನ್ನಟ್ಟಿ ಹೊಡೆದು ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬಿದ್ದರೆ ಅದನ್ನು ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದನ್ನು ನಾನು ಅಟ್ಟಿಸಿಕೊಂಡು ಹೋಗುತ್ತಿದ್ದೆ. ನಾನು ಆ ಕ್ರೂರ ಮೃಗದ ಮೇಲೆ ಆಕ್ರಮಣ ಮಾಡಿ, ಅದರ ಬಾಯಿಂದ ಕುರಿಯನ್ನು ಬಿಡಿಸುತ್ತಿದ್ದೆನು. ಅದು ನನ್ನ ಮೇಲೆ ಆಕ್ರಮಣ ಮಾಡಿದರೆ, ನಾನು ಅದರ ಗಡ್ಡ ಹಿಡಿದು ಹೋರಾಡಿ ಅದನ್ನು ಕೊಲ್ಲುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ನಾನು ಅದರ ಹಿಂದೆ ಹೋಗಿ, ಅದನ್ನು ಹೊಡೆದುಬಿಟ್ಟು, ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂದಿರುಗಿ ಬಿದ್ದಾಗ, ನಾನು ಅದರ ಗಡ್ಡವನ್ನು ಹಿಡಿದು, ಹೊಡೆದು ಕೊಂದುಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:35
9 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು.


ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.


ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II


ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಬ್ಬ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು.


ಆಗ ದಾವೀದನು, “ತಮ್ಮ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಅಥವಾ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗುವಾಗ


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು