Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:46 - ಕನ್ನಡ ಸತ್ಯವೇದವು C.L. Bible (BSI)

46 ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು; ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದುಹಾಕಿ ಫಿಲಿಷ್ಟಿಯಸೈನ್ಯದ ಶವಗಳನ್ನು ಮೃಗಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:46
30 ತಿಳಿವುಗಳ ಹೋಲಿಕೆ  

ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಇದರಿಂದ ಭೂನಿವಾಸಿಗಳೆಲ್ಲರು ಸರ್ವೇಶ್ವರನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವರು.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.


ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು; ಅವುಗಳನ್ನು ಬೆದರಿಸಿ ಓಡಿಸುವುದಕ್ಕೂ ಯಾರೂ ಇರುವುದಿಲ್ಲ.


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಹೆಣವಿದ್ದೆಡೆ ರಣಹದ್ದುಗಳು ಬಂದು ಸೇರುತ್ತವೆ.


ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


“ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು.


ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿ ಉಂಟುಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವರು.


ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


“ಕಾಡಿನ ಮೃಗಗಳೇ ಬನ್ನಿ, ಬಂದು ನುಂಗಿಬಿಡಿ!


ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.


ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು.


ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.


ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು