Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಅವನೊಂದಿಗೆ ಇದ್ದುದರಿಂದ ಅವನು ಎಲ್ಲ ಕಾರ್ಯಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಾ ಕಾರ್ಯಗಳಲ್ಲಿ ಇವನು ವಿವೇಕದಿಂದ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ದಾವೀದನ ಜೊತೆಗಿದ್ದನು. ಆದ್ದರಿಂದ ದಾವೀದನು ಎಲ್ಲದರಲ್ಲೂ ಯಶ್ವಸಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ತನ್ನ ಸಕಲ ಮಾರ್ಗಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:14
18 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.


ಸರ್ವೇಶ್ವರಸ್ವಾಮಿ ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ನಾಡಿನಲ್ಲೆಲ್ಲಾ ಹರಡಿತು.


ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಈ ಗುರುತುಗಳೆಲ್ಲ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ವರ್ತಿಸು, ದೇವರು ನಿನ್ನೊಂದಿಗೆ ಇದ್ದಾರೆ!


ಇದರಿಂದಾಗಿ ಸೌಲನಿಗೆ ಮತ್ತಷ್ಟು ಹೆದರಿಕೆಯುಂಟಾಯಿತು.


ಸರ್ವೇಶ್ವರ ಇವನ ಸಂಗಡ ಇದ್ದುದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಸ್ಸೀರಿಯದ ಅರಸನಿಗೆ ವಿರುದ್ಧ ದಂಗೆಯೆದ್ದು ಸ್ವತಂತ್ರನಾದನು.


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.


ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಫಿಲಿಷ್ಟಿಯರು ಮತ್ತೆ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ತಿಯಾಗಿ ಸೋಲಿಸಿ ಓಡಿಸಿಬಿಟ್ಟನು.


ಸೇನಾಧೀಶ್ವರ ಹಾಗು ಸರ್ವೇಶ್ವರರಾದ ದೇವರು ಅವನೊಂದಿಗೆ ಇದ್ದರು. ಆದ್ದರಿಂದ ಅವನು ಅಭಿವೃದ್ಧಿಹೊಂದುತ್ತಾ ಬಂದನು.


ಇದಲ್ಲದೆ ಅವನು ದಮಸ್ಕದ ಸಿರಿಯಾ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕುತ್ತಿತ್ತು.


ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ಬಾಳ್‍ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು