Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:28 - ಕನ್ನಡ ಸತ್ಯವೇದವು C.L. Bible (BSI)

28 ಸರ್ವೇಶ್ವರ ದಾವೀದನೊಂದಿಗಿದ್ದಾರೆಂದು ಸೌಲನಿಗೆ ಮನದಟ್ಟಾಯಿತು. ತನ್ನ ಮಗಳು ಅವನನ್ನು ಬಹಳವಾಗಿ ಪ್ರೀತಿಸುತ್ತಾಳೆಂದು ಸಹ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಕೆಯು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು ಸೌಲನು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ದಾವೀದನೊಂದಿಗಿರುವುದನ್ನೂ ತನ್ನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನೂ ಸೌಲನು ಗಮನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸೌಲನು, ಯೆಹೋವ ದೇವರು ದಾವೀದನ ಸಂಗಡ ಇದ್ದಾರೆಂದೂ, ತನ್ನ ಮಗಳಾದ ಮೀಕಲಳು ಅವನನ್ನು ಪ್ರೀತಿ ಮಾಡಿದ್ದಳೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:28
10 ತಿಳಿವುಗಳ ಹೋಲಿಕೆ  

ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಆಗ ಸೌಲನು ದಾವೀದನಿಗೆ, “ಪುತ್ರನೇ, ದಾವೀದನೇ, ದೇವರು ನಿನ್ನನ್ನು ಹರಸಲಿ! ನೀನು ಮಹಾಕಾರ್ಯಗಳನ್ನು ಸಾಧಿಸಿ ಯಶಸ್ವಿಯಾಗು,” ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.


ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.


ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.


ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.


ಇತ್ತ ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸತೊಡಗಿದಳು. ಈ ವಿಷಯ ಸೌಲನಿಗೆ ತಿಳಿದುಬಂದಾಗ ಅವನಿಗೆ ಸಂತೋಷ ಆಯಿತು.


ನೇಮಕವಾದ ದಿನಗಳು ಮುಗಿಯುವ ಮೊದಲೇ ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಮಂದಿಯನ್ನು ಕೊಂದು, ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗಲು ಬೇಕಾಗಿದ್ದ ಲೆಕ್ಕಾಚಾರವನ್ನು ಪೂರ್ತಿ ಆಗಿ ಒಪ್ಪಿಸಿದನು. ಆಗ ಸೌಲನು ತನ್ನ ಮಗಳು ಮೀಕಲಳನ್ನು ದಾವೀದನಿಗೆ ಮದುವೆಮಾಡಿಕೊಟ್ಟನು.


ಈ ಕಾರಣ ಅವನ ಭಯ ಮತ್ತಷ್ಟೂ ಅಧಿಕವಾಯಿತು; ದಾವೀದನನ್ನು ತನ್ನ ಜೀವಮಾನ ಪರಿಯಂತ ವೈರಿಯೆಂದು ಭಾವಿಸತೊಡಗಿದನು.


ಅದಕ್ಕೆ ಅವರು, “ಸರ್ವೇಶ್ವರ ನಿನ್ನ ಸಂಗಡ ಇದ್ದಾರೆಂಬುದು ನಮಗೆ ಚೆನ್ನಾಗಿ ಕಂಡುಬಂದಿದೆ. ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾದ ಒಪ್ಪಂದ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು