Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:30 - ಕನ್ನಡ ಸತ್ಯವೇದವು C.L. Bible (BSI)

30 ಫಿಲಿಷ್ಟಿಯ ರಾಜರು ಯುದ್ಧಕ್ಕೆ ಬಂದಾಗಲೆಲ್ಲ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಈ ಕಾರಣ ಅವನ ಹೆಸರು ಸುಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಸುಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಫಿಲಿಷ್ಟಿಯ ಸೇನಾಧಿಪತಿಗಳು ಇಸ್ರೇಲರೊಂದಿಗೆ ಹೋರಾಡಲು ಹೋಗುತ್ತಲೇ ಇದ್ದರು. ಆದರೆ ದಾವೀದನು ಪ್ರತಿಸಲವೂ ಅವರನ್ನು ಸೋಲಿಸುತ್ತಿದ್ದನು. ದಾವೀದನು ಸೌಲನ ಒಬ್ಬ ಯಶಸ್ವಿಯಾದ ಅಧಿಕಾರಿಯಾಗಿದ್ದನು! ಆದ್ದರಿಂದ ದಾವೀದನು ಪ್ರಖ್ಯಾತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:30
17 ತಿಳಿವುಗಳ ಹೋಲಿಕೆ  

ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗು ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು.


ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಎಲ್ಲವನ್ನು ವಿವೇಕದಿಂದ ಮಾಡಿ ಯಶಸ್ಸು ಪಡೆಯುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇದರಿಂದ ಎಲ್ಲ ಅಧಿಕಾರಿಗಳಿಗೂ ಜನಸಾಮಾನ್ಯರಿಗೂ ಸಂತೋಷವಾಯಿತು.


ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”


ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನಿನ್ನ ಕಟ್ಟಳೆಗಳ ಧ್ಯಾನಿ ನಾನಾದುದರಿಂದ I ನಾನಧಿಕ ಜ್ಞಾನಿ ನನ್ನ ಬೋಧಕರೆಲ್ಲರಿಗಿಂತ II


ಪ್ರಭು ಅಲ್ಪವೆಂದೆಣಿಸನು I ತನ್ನ ಭಕ್ತರ ಮರಣವನು II


ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ;


ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಈ ಕಾರಣ ಅವನ ಭಯ ಮತ್ತಷ್ಟೂ ಅಧಿಕವಾಯಿತು; ದಾವೀದನನ್ನು ತನ್ನ ಜೀವಮಾನ ಪರಿಯಂತ ವೈರಿಯೆಂದು ಭಾವಿಸತೊಡಗಿದನು.


ನಾನು ಈ ದಿನ ನಿಮ್ಮ ಜೀವವನ್ನು ಮಾನ್ಯವಾದದ್ದೆಂಣಿಸಿದಂತೆ ಸರ್ವೇಶ್ವರ ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲ ಇಕ್ಕಟ್ಟಿನಿಂದ ಬಿಡಿಸಲಿ,” ಎಂದನು.


ಫಿಲಿಷ್ಟಿಯರು ಮತ್ತೆ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ತಿಯಾಗಿ ಸೋಲಿಸಿ ಓಡಿಸಿಬಿಟ್ಟನು.


ನೀನು ಹೋದಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು