Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:1 - ಕನ್ನಡ ಸತ್ಯವೇದವು C.L. Bible (BSI)

1 ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೌಲನು ತನ್ನ ಮಗನಾದ ಯೋನಾತಾನನಿಗೂ ತನ್ನ ಅಧಿಕಾರಿಗಳಿಗೂ ದಾವೀದನನ್ನು ಕೊಂದು ಹಾಕಲು ತಿಳಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳ ಇಷ್ಟಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೌಲನು ತನ್ನ ಮಗ ಯೋನಾತಾನ ಮತ್ತು ತನ್ನ ಸಮಸ್ತ ಸೇವಕರಿಗೆ ದಾವೀದನನ್ನು ಕೊಲ್ಲಬೇಕೆಂದು ಹೇಳಿದನು. ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:1
10 ತಿಳಿವುಗಳ ಹೋಲಿಕೆ  

ದಾವೀದನ ಮತ್ತು ಸೌಲನ ಸಂಭಾಷಣೆ ಮುಗಿಯಿತು. ಇದಾದ ಕೂಡಲೆ ಯೋನಾತಾನನು ಹಾಗು ದಾವೀದನು ಪ್ರಾಣ ಗೆಳೆಯರಾದರು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಅಂದಿನಿಂದ ಸೌಲನು ದಾವೀದನ ಮೇಲೆ ಕಣ್ಣಿಟ್ಟನು.


ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು.


ಆದುದರಿಂದ ಅವನು ದಾವೀದನಿಗೆ, “ನನ್ನ ತಂದೆ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾರೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಟ್ಟಾದ ಸ್ಥಳದಲ್ಲಿ ಅಡಗಿಕೊಂಡಿರು.


ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.


ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)


ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.


ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿದರು; “ಇಗೋ, ನಿಮ್ಮ ಜೀವತೆಗೆಯಬೇಕೆಂದಿದ್ದ ನಿಮ್ಮ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ; ಅರಸರಾದ ನಮ್ಮ ಒಡೆಯರಿಗಾಗಿ ಸರ್ವೇಶ್ವರಸ್ವಾಮಿ ಸೌಲನಿಗೂ ಅವನ ಸಂತಾನಕ್ಕೂ ಈ ಹೊತ್ತು ಸೇಡುತೀರಿಸಿದ್ದಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು