Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:20 - ಕನ್ನಡ ಸತ್ಯವೇದವು C.L. Bible (BSI)

20 ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಅವನನ್ನು ಹಿಡಿದು ತರುವದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪರವಶವಾಗಿ ಮಾತಾಡುವದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವದನ್ನೂ ಕಂಡಾಗ ದೇವರ ಆತ್ಮವು ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದಾವೀದನನ್ನು ಬಂಧಿಸಿ ತರಲು ಸೌಲನು ಜನರನ್ನು ಕಳುಹಿಸಿದನು. ಆದರೆ ಆ ಜನರು ಪಾಳೆಯಕ್ಕೆ ಬರುವಷ್ಟರಲ್ಲಿ ಪ್ರವಾದಿಗಳು ಅಲ್ಲಿ ಪ್ರವಾದಿಸುತ್ತಿದ್ದರು. ಸಮುವೇಲನು ಅವರ ನಾಯಕನಾಗಿ ನಿಂತಿದ್ದನು. ದೇವರಾತ್ಮವು ಸಂದೇಶಕರ ಮೇಲೆ ಬಂದದ್ದರಿಂದ ಅವರೂ ಪ್ರವಾದಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:20
13 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿಯನ್ನು ಕುರಿತು ಜನರು ಹೀಗೆ ಆಡುತ್ತಿದ್ದ ಗುಸುಗುಸು ಮಾತು ಫರಿಸಾಯರ ಕಿವಿಗೆ ಮುಟ್ಟಿತು. ಅವರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸಲು ಕಾಲಾಳುಗಳನ್ನು ಕಳುಹಿಸಿದರು.


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಅವನು ದೇವಗಿರಿಗೆ ಬಂದ ಕೂಡಲೆ ಪರವಶರಾದ ಪ್ರವಾದಿಗಳ ಗುಂಪೊಂದು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮ ಅವನ ಮೇಲೆ ಇಳಿದು ಬಂದುದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು, “ಅವರಿಗೆ ಮೈ ಚೆನ್ನಾಗಿಲ್ಲ,” ಎಂದು ಹೇಳಿ ಕಳುಹಿಸಿದಳು.


ಸೌಲನು ಕೂಡಲೆ ದೂತರನ್ನು ಕರೆಯಿಸಿ, “ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕು,” ಎಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀವು ಈ ರಾತ್ರಿಯೇ ತಪ್ಪಿಸಿಕೊಳ್ಳದೆ ಇದ್ದರೆ ನಾಳೆ ಬೆಳಿಗ್ಗೆ ಹತರಾಗುವಿರಿ,” ಎಂದು ಹೇಳಿ


ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ.


ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.


ದಾವೀದನು ರಾಮಾದ ಮಠದಲ್ಲಿ ಇರುವುದು ಸೌಲನಿಗೆ ಗೊತ್ತಾಯಿತು.


ಸೌಲನಿಗೆ ಈ ವರ್ತಮಾನ ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು. ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು