Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:4 - ಕನ್ನಡ ಸತ್ಯವೇದವು C.L. Bible (BSI)

4 ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿದನು. “ಒಡೆಯರಾದ ತಾವು ತಮ್ಮ ಸೇವಕ ದಾವೀದನಿಗೆ ಅನ್ಯಾಯ ಮಾಡಬಾರದು; ಅವನು ನಿಮಗೆ ದ್ರೋಹ ಮಾಡಲಿಲ್ಲ; ಅವನು ಮಾಡಿದ್ದೆಲ್ಲವು ನಿಮ್ಮ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ - ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯಮಾಡದಿರಲಿ; ಅವನು ನಿನಗೆ ದ್ರೋಹಮಾಡಲಿಲ್ಲ; ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋನಾತಾನನು ತನ್ನ ತಂದೆಯಾದ ಸೌಲನೊಂದಿಗೆ ಮಾತನಾಡಿದನು. ಯೋನಾತಾನನು ದಾವೀದನ ಬಗ್ಗೆ ಒಳ್ಳೆಯ ಸಂಗತಿಗಳನ್ನು ತಿಳಿಸಿದನು. ಯೋನಾತಾನನು, “ನೀನು ರಾಜ. ದಾವೀದನು ನಿನ್ನ ಸೇವಕ. ದಾವೀದನು ನಿನಗೆ ಯಾವ ಕೇಡನ್ನೂ ಮಾಡಿಲ್ಲ. ಆದ್ದರಿಂದ ಅವನಿಗೆ ಯಾವ ಕೇಡನ್ನೂ ಮಾಡಬೇಡ. ದಾವೀದನು ನಿನಗೆ ಯಾವಾಗಲೂ ಒಳ್ಳೆಯವನಾಗಿಯೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ಯೋನಾತಾನನು ತನ್ನ ತಂದೆ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೆಯದನ್ನು ಮಾತನಾಡಿ ಅವನಿಗೆ, “ಅರಸನು ತನ್ನ ಸೇವಕನಾದ ದಾವೀದನಿಗೆ ದ್ರೋಹಮಾಡದೆ ಇರಲಿ. ಏಕೆಂದರೆ ಅವನು ನಿನಗೆ ದ್ರೋಹಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:4
15 ತಿಳಿವುಗಳ ಹೋಲಿಕೆ  

ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.


ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು.


ಅದಕ್ಕೆ ಯೋನಾತಾನನು, “ಅವನು ಏಕೆ ಸಾಯಬೇಕು? ಅವನು ಏನು ಮಾಡಿದ್ದಾನೆ?” ಎಂದು ತಂದೆಯನ್ನು ಕೇಳಿದನು.


ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II


ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?


ಹೀಗೆ ನೀವು ನಿಮ್ಮ ಸಹೋದರರ ದುರ್ಬಲ ಮನಸ್ಸಾಕ್ಷಿಯನ್ನು ನೋಯಿಸಿ, ಅವರ ವಿರುದ್ಧ ಪಾಪ ಕಟ್ಟಿಕೊಳ್ಳುವುದರಿಂದ ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ.


“ನೆರೆಯವನಿಗೆ ವಿರುದ್ಧ ತಪ್ಪುಮಾಡಿದವನು ಎಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,


ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ.


ನಿರಪರಾಧಿ, ನಿರ್ದೋಷಿ ನಾನಾದರು I ಮೇಲೆ ಬೀಳಲಿದೋ ಸಜ್ಜುಗೊಂಡಿಹರು I ಎಚ್ಚೆತ್ತು ಪ್ರಭು, ನನಗೆ ನೆರವಾಗಿರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು