Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:16 - ಕನ್ನಡ ಸತ್ಯವೇದವು C.L. Bible (BSI)

16 ಬಲಿಯರ್ಪಿಸುತ್ತಿದ್ದವನು ಅವನಿಗೆ, “ಮೊದಲು ಕೊಬ್ಬನ್ನು ಹೋಮಮಾಡೋಣ; ಅನಂತರ ನಿನಗೆ ಬೇಕಾದುದನ್ನು ತೆಗೆದುಕೊಳ್ಳುವಿಯಂತೆ,” ಎಂದು ಹೇಳಿದಾಗ, “ಕೂಡದು, ಈಗಲೇ ಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುತ್ತೇನೆ,” ಎಂದು ಪೀಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅರ್ಪಿಸುವವನು - ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದಾಗ ಅವನು - ಈಗಲೇ ಕೊಡಬೇಕು: ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಜ್ಞವನ್ನರ್ಪಿಸುವವನು, “ಕೊಬ್ಬನ್ನು ಮೊದಲು ಹೋಮ ಮಾಡೋಣ. ಅನಂತರ ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ” ಎಂದು ಹೇಳಿದರೆ, ಯಾಜಕರ ಸೇವಕನು, “ಇಲ್ಲ, ಯಾಜಕನಿಗಾಗಿ ಕರಿಯಲು ಮಾಂಸವನ್ನು ಈಗಲೇ ಕೊಡು. ನೀನು ಕೊಡುವುದಿಲ್ಲವಾದರೆ, ನಾನೇ ತೆಗೆದುಕೊಳ್ಳುತ್ತೇನೆ” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಮೊದಲು ಕೊಬ್ಬನ್ನು ಸುಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ,” ಎಂದು ಯಾರಾದರೂ ಹೇಳಿದರೆ; ಸೇವಕನು, “ಇಲ್ಲ ಈಗಲೇ ಕೊಡು. ನೀನು ಕೊಡದಿದ್ದರೆ, ನಾನು ಒತ್ತಾಯದಿಂದ ತೆಗೆದುಕೊಳ್ಳುವೆನು,” ಎನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:16
9 ತಿಳಿವುಗಳ ಹೋಲಿಕೆ  

ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ಸಿಟ್ಟಿನವರು. ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಡುವಿರಿ. ಆದುದರಿಂದ ಬಾಯಿಮುಚ್ಚಿಕೊಂಡು ಹೋಗಿ,” ಎಂದು ಹೇಳಿ ಮುಂದೆ ನಡೆದರು.


ಇದಲ್ಲದೆ, ಕೊಬ್ಬನ್ನು ಹೋಮಮಾಡುವುದಕ್ಕೆ ಮುಂಚೆಯೇ ಯಾಜಕನ ಆಳು ಬಂದು ಬಲಿಯರ್ಪಿಸುತ್ತಿದ್ದವನಿಗೆ, “ಹುರಿಯತಕ್ಕ ಮಾಂಸವನ್ನು ಯಾಜಕನಿಗೆ ಕೊಡು; ನೀವು ಬೇಯಿಸಿದ ಮಾಂಸವನ್ನು ಅವರು ತೆಗೆದುಕೊಳ್ಳುವುದಿಲ್ಲ; ಅವರಿಗೆ ಹಸಿ ಮಾಂಸವೇ ಬೇಕು,” ಎನ್ನುತ್ತಿದ್ದನು.


ಹೀಗೆ ಸರ್ವೇಶ್ವರನ ನೈವೇದ್ಯವನ್ನು ತುಚ್ಛವಾಗಿ ಕಾಣುತ್ತಿದ್ದುದರಿಂದ ದೇವರ ದೃಷ್ಟಿಯಲ್ಲಿ ಏಲಿಯ ಮಕ್ಕಳ ಪಾಪ ಘೋರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು