Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:22 - ಕನ್ನಡ ಸತ್ಯವೇದವು C.L. Bible (BSI)

22 ಈಗ ಏಲಿ ಬಹಳ ಮುದುಕನಾಗಿದ್ದ. ತನ್ನ ಮಕ್ಕಳು ಇಸ್ರಯೇಲ್ ಜನರಿಗೆ ಮಾಡುತ್ತಿದ್ದುದೆಲ್ಲಾ ಅವನ ಕಿವಿಗೆ ಬೀಳುತ್ತಿತ್ತು. ದೇವದರ್ಶನದ ಗುಡಾರದ ಬಾಗಿಲಿನಲ್ಲಿ ಕೆಲಸಮಾಡುತ್ತಿದ್ದ ಸ್ತ್ರೀಯರೊಡನೆ ಮಲಗುತ್ತಿದ್ದಾರೆಂಬುದನ್ನೂ ಕೇಳಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲ್ಯರಲ್ಲಿ ನಡಿಸುತ್ತಿರುವದನ್ನೂ ಅವರು ದೇವದರ್ಶನದ ಗುಡಾರದ ಬಾಗಲಿನಲ್ಲಿ ಸೇವೆಮಾಡುವ ಸ್ತ್ರೀಯರೊಡನೆ ಸಂಗವಿುಸುತ್ತಿರುವದನ್ನೂ ಕೇಳಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಏಲಿಯು ಬಹಳ ವೃದ್ಧನಾದನು. ತನ್ನ ಗಂಡುಮಕ್ಕಳು ಶೀಲೋವಿನಲ್ಲಿ ಇಸ್ರೇಲರೊಂದಿಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಮತ್ತು ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿರುವ ಸ್ತ್ರೀಯರೊಡನೆ ಕೂಡುತ್ತಿರುವುದನ್ನು ಅವನು ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಲಿಯು ಬಹಳ ವೃದ್ಧನಾಗಿದ್ದನು. ಅವನು ತನ್ನ ಪುತ್ರರು ಇಸ್ರಾಯೇಲ್ ಜನರಿಗೆ ಮಾಡುವುದೆಲ್ಲವನ್ನೂ, ಅವರು ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬುದನ್ನೂ ಕೇಳಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:22
10 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆಮಾಡುತ್ತಿದ್ದ ಮಹಿಳೆಯರು ಕೊಟ್ಟ ತಾಮ್ರದ ದರ್ಪಣಗಳಿಂದ ನೀರಿನ ತೊಟ್ಟಿಯನ್ನೂ ಅದರ ಪೀಠವನ್ನೂ ಮಾಡಿದನು.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.


ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ.


ಆದುದರಿಂದ ಅವರಿಗೆ, “ಜನರೆಲ್ಲರು ನಿಮ್ಮ ದುಷ್ಕೃತ್ಯಗಳ ಬಗ್ಗೆ ದೂರುವುದನ್ನು ಕೇಳಿದ್ದೇನೆ. ಹೀಗೇಕೆ ಮಾಡುತ್ತೀರಿ?


ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು