Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:3 - ಕನ್ನಡ ಸತ್ಯವೇದವು C.L. Bible (BSI)

3 ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:3
26 ತಿಳಿವುಗಳ ಹೋಲಿಕೆ  

ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.


ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II


ಉಬ್ಬಿಹೋಗಿಹರು ಕೆಡುಕರೆಲ್ಲರು I ಜಂಬ ಕೊಚ್ಚಿಕೊಳ್ಳುತ್ತಿಹರು ಅವರು II


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


“ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ?


'ತೆಕೇಲ್’ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನಿನ್ನ ತೂಕ ಕಡಿಮೆಯಾಗಿ ಕಂಡುಬಂದಿದೆ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.


ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II


ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II


ಕಾಣಿಸಿಕೊಳ್ಳದಿರಲಿ ನಿಮ್ಮ ಕೋರೆಕೊಂಬುಗಳು I ಮಾತೆತ್ತದಿರಲಿ ನಿಮ್ಮಗಳ ಕೊಬ್ಬಿದಾ ಕಂಠಗಳು” II


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಆಗ ಜೆಬುಲನು ಅವನಿಗೆ, “ಈಗ ನಿನ್ನ ಮಾತೆಲ್ಲಿ? ಅಬೀಮೆಲೆಕನು ಎಷ್ಟರವನು? ನಾವು ಅವನಿಗೆ ಏಕೆ ಸೇವೆಮಾಡಬೇಕು ಎಂದು ಕೊಚ್ಚಿಕೊಂಡಿಯಲ್ಲವೆ? ಅವರು ನೀನು ತಿರಸ್ಕರಿಸಿದ ಜನರಲ್ಲವೇ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ,” ಎಂದು ಹೇಳಿದನು.


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು