Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:35 - ಕನ್ನಡ ಸತ್ಯವೇದವು C.L. Bible (BSI)

35 ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನನ್ನ ದೃಷ್ಟಿಗೂ ಮನಸ್ಸಿಗೂ ಸರಿಯಾದದ್ದನ್ನೇ ಮಾಡುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಾನು ನನಗೋಸ್ಕರ ನಂಬಿಗಸ್ತನಾದ ಯಾಜಕನೊಬ್ಬನನ್ನು ಆರಿಸಿಕೊಳ್ಳುತ್ತೇನೆ. ಈ ಯಾಜಕನು ನಾನು ಹೇಳುವುದನ್ನು ಕೇಳುವನು ಮತ್ತು ನನಗೆ ಇಷ್ಟವಾದುದನ್ನು ಮಾಡುವನು. ಈ ಯಾಜಕನ ಕುಟುಂಬವನ್ನು ನಾನು ಬಲಗೊಳಿಸುವೆನು. ನಾನು ಆರಿಸಿಕೊಂಡಿರುವ ರಾಜನ ಬಳಿಯಲ್ಲಿ ಅವನು ಸದಾಕಾಲ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:35
28 ತಿಳಿವುಗಳ ಹೋಲಿಕೆ  

ಸರ್ವಶಕ್ತರಾದ ಸರ್ವೇಶ್ವರಾ, ಇಸ್ರಯೇಲ್ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.


ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು.


ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ. ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.


ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;


ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಸರ್ವೇಶ್ವರನ ಸನ್ನಿಧಿಯಲ್ಲಿ ಮಹಾಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ದಾವೀದನ ಮಗ ಸೊಲೊಮೋನನನ್ನು ಮತ್ತೆ ಅರಸನನ್ನಾಗಿ ಆರಿಸಿಕೊಂಡು, ಅವನು ರಾಜನಾಗುವುದಕ್ಕೂ ಚಾದೋಕನು ಯಾಜಕನಾಗುವುದಕ್ಕೂ ಅಭಿಷೇಕಿಸಿ, ಸರ್ವೇಶ್ವರನಿಗೆ ಪ್ರತಿಷ್ಠಿಸಿದರು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ಯಾಜಕ ಚಾದೋಕನೂ ಪ್ರವಾದಿ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜಾಭಿಷೇಕ ಮಾಡಿದ್ದಾರೆ. ಅಲ್ಲಿಂದ ಅವರು ಹರ್ಷಾನಂದದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”


ನಿನ್ನ ಮನೆಯಲ್ಲಿ ಅಳಿದು ಉಳಿದವರು ಬಂದು ಅವನ ಮುಂದೆ ಅಡ್ಡಬೀಳುವರು; ‘ನಮಗೊಂದು ಬೆಳ್ಳಿಕಾಸನ್ನಾದರೂ ರೊಟ್ಟಿ ಚೂರನ್ನಾದರೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವುದಕ್ಕಾದರು ನಮ್ಮನ್ನು ಸೇರಿಸಿಕೋ’ ಎಂದು ಬೇಡಿಕೊಳ್ಳುವರು".


ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.


ಆಗ ಸಮುವೇಲನು ಹಾಲುಕುಡಿಯುವ ಒಂದು ಕುರಿಮರಿಯನ್ನು ತಂದು ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸಿ, ಇಸ್ರಯೇಲರ ಪರವಾಗಿ ಪ್ರಾರ್ಥನೆಮಾಡಿದನು. ಸರ್ವೇಶ್ವರ ಸದುತ್ತರವನ್ನು ದಯಪಾಲಿಸಿದರು.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.


“ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;


ಅವರು ಬಲಿಭೋಜನಕ್ಕಾಗಿ ಗುಡ್ಡಕ್ಕೆ ಹೋಗುವ ಮೊದಲೇ ನೀವು ಊರೊಳಕ್ಕೆ ಹೋದರೆ ಸಿಕ್ಕುವರು. ಅವರು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಅವರು ಹೋಗಿ ಬಲಿ ಆಹಾರವನ್ನು ಆಶೀರ್ವದಿಸುತ್ತಾರೆ; ಅನಂತರವೇ ಆಮಂತ್ರಿತರು ಊಟಮಾಡುವುದು. ಈಗಲೇ ಹೋಗಿ; ಅವನು ಸಿಕ್ಕುವ ಸಮಯ ಇದೇ,” ಎಂದರು ಆ ಮಹಿಳೆಯರು.


ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಚೈತನ್ಯವನ್ನು ಕೊಟ್ಟರು. ಅದೇ ದಿನದಲ್ಲಿ ಆ ಎಲ್ಲ ಘಟನೆಗಳು ಸಂಭವಿಸಿದವು.


ಅವನು ದೇವಗಿರಿಗೆ ಬಂದ ಕೂಡಲೆ ಪರವಶರಾದ ಪ್ರವಾದಿಗಳ ಗುಂಪೊಂದು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮ ಅವನ ಮೇಲೆ ಇಳಿದು ಬಂದುದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು