Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:27 - ಕನ್ನಡ ಸತ್ಯವೇದವು C.L. Bible (BSI)

27 ಮರುದಿವಸದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ, ದಾವೀದನ ಸ್ಥಾನ ಬರಿದಾಗಿದ್ದುದರಿಂದ ಸೌಲನು, “ಜೆಸ್ಸೆಯನ ಮಗ ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಮಗ ಯೋನಾತಾನನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮರುದಿವಸದಲ್ಲಿಯೂ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ ದಾವೀದನ ಸ್ಥಾನವು ಬರಿದಾಗಿದ್ದದರಿಂದ ಸೌಲನು - ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಾರನೆಯ ದಿನದಲ್ಲಿ, ಅಂದರೆ ಆ ತಿಂಗಳ ಎರಡನೆಯ ದಿನದಲ್ಲಿ ದಾವೀದನ ಸ್ಥಳವು ಮತ್ತೆ ಖಾಲಿಯಾಗಿತ್ತು. ಆಗ ಸೌಲನು ತನ್ನ ಮಗನಾದ ಯೋನಾತಾನನಿಗೆ, “ನಿನ್ನೆ ಮತ್ತು ಇಂದು ಅಮಾವಾಸ್ಯೆ ಔತಣಕ್ಕೆ ಇಷಯನ ಮಗನಾದ ದಾವೀದನು ಏಕೆ ಬರಲಿಲ್ಲ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಮಾವಾಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡುವ ಸ್ಥಳವು ಹಾಗೆಯೇ ಬರಿದಾಗಿತ್ತು. ಆದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಪುತ್ರನಾದ ಯೋನಾತಾನನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:27
12 ತಿಳಿವುಗಳ ಹೋಲಿಕೆ  

ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.


ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.


ಸೌಲನು ಪುನಃ ತನ್ನ ಆಳುಗಳಿಗೆ, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿ, ಅವನನ್ನು ಕೊಂದುಹಾಕುತ್ತೇನೆ,” ಎಂದು ಆಜ್ಞಾಪಿಸಿದನು.


ಆಗ ಸೌಲನು, “ಗೋಡೆಗೆ ಕಚ್ಚಿಕೊಳ್ಳುವಂತೆ ಈ ದಾವೀದನನ್ನು ತಿವಿಯುವೆನು,” ಎಂದುಕೊಂಡು ಅವನತ್ತ ಈಟಿಯನ್ನು ಎರಡುಸಾರಿ ಎಸೆದನು. ಎರಡು ಸಾರಿಯೂ ದಾವೀದನು ತಪ್ಪಿಸಿಕೊಂಡನು.


ಅದಕ್ಕೆ ದಾವೀದನು, “ನಾಳೆ ಶುದ್ಧಪಾಡ್ಯಮಿ; ನಾನು ಅರಸರ ಪಂಕ್ತಿಯಲ್ಲಿ ಕುಳಿತು ಊಟಮಾಡಬೇಕಾಗಿರುವುದು; ನೀನು ಅಪ್ಪಣೆ ಕೊಟ್ಟರೆ ನಾನು ಈಗಲೆ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ಆ ದಿವಸ ಅವನ ವಿಷಯವಾಗಿ ಏನೂ ಹೇಳಲಿಲ್ಲ. “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿರಬಹುದು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು,” ಎಂದುಕೊಂಡನು.


ಅದಕ್ಕೆ ಯೋನಾತಾನನು, “ದಾವೀದನು, ಬೆತ್ಲೆಹೇಮಿನಲ್ಲಿ ತಮ್ಮ ಗೋತ್ರದವರು ಬಲಿದಾನ ಮಾಡುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು