Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:30 - ಕನ್ನಡ ಸತ್ಯವೇದವು C.L. Bible (BSI)

30 ಆಗ ಸೌಲನು ಸಿಡಿದೆದ್ದು ಯೋನಾತಾನನಿಗೆ, “ಎಲೋ, ದುಷ್ಟದಾಸಿಯ ಮಗನೇ, ನೀನು ಜೆಸ್ಸೆಯನ ಮಗನೊಡನೆ ಸ್ನೇಹದಿಂದ ಇರುವುದು ನನಗೆ ಗೊತ್ತಿಲ್ಲವೇ? ಈ ಸ್ನೇಹದಿಂದ ನಿನಗೂ ಹೆತ್ತವಳಿಗೂ ಮಾನಭಂಗ ತರುತ್ತಾ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಸೌಲನು ಬಹಳವಾಗಿ ಉರಿಗೊಂಡು ಯೋನಾತಾನನಿಗೆ - ಎಲೋ, ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸೌಲನು ಯೋನಾತಾನನ ಮೇಲೆ ಬಹಳ ಕೋಪಗೊಂಡು, “ನೀನು ಅವಿಧೇಯಳಾದ ದಾಸಿಯ ಮಗ. ನೀನೂ ಅವಳಂತೆಯೇ ಅವಿಧೇಯ. ನೀನು ದಾವೀದನ ಪಕ್ಷವಹಿಸಿರುವುದು ನನಗೆ ಗೊತ್ತಿದೆ. ನೀನು ನಿನಗೂ ಮತ್ತು ನಿನ್ನ ತಾಯಿಗೂ ನಾಚಿಕೆಯನ್ನು ತಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ, “ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ, ಇಷಯನ ಮಗನನ್ನು ನೀನು ಆರಿಸಿಕೊಂಡಿದ್ದೀ ಎಂದು ನಾನರಿಯೆನೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಅಸಹ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:30
14 ತಿಳಿವುಗಳ ಹೋಲಿಕೆ  

ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.


ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.


ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಕಲ್ಲು ಭಾರ, ಮರಳು ಭಾರ, ಮೂಢನ ರೇಗಾಟ ಇವೆರಡಕ್ಕೂ ಬಲುಭಾರ.


ಆತ್ಮಸ್ವಾಧೀನವಲ್ಲದ ಮನುಷ್ಯ ಗೋಡೆಬಿದ್ದು ಕಾವಲಿಲ್ಲದ ಹಾಳೂರು.


ಕಡುಕೋಪಿ ದಂಡನೆಯನ್ನು ಅನುಭವಿಸಲಿ ಬಿಡು; ಒಮ್ಮೆ ಬಿಡಿಸಿದರೆ, ಬಾರಿಬಾರಿಗೂ ಬಿಡಿಸಬೇಕಾಗುವುದು.


ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ತನ್ನ ಅಣ್ಣ ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ತಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರಲು ಅಪ್ಪಣೆಯಾಗಬೇಕು, ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಆದುದರಿಂದ ಅವನು ಅರಸರ ಪಂಕ್ತಿಗೆ ಬರಲಿಲ್ಲ,” ಎಂದು ಉತ್ತರಕೊಟ್ಟನು.


ಆ ಜೆಸ್ಸೆಯನ ಮಗ ಭೂಲೋಕದಲ್ಲಿ ಇರುವವರೆಗೆ ನಿನಗಾಗಲಿ, ರಾಜನಾಗುವ ಹಕ್ಕುಬಾಧ್ಯತೆಗಳಿಗಾಗಲಿ ಉಳಿವಿಲ್ಲ. ಆದುದರಿಂದ ಹೋಗು, ಅವನನ್ನು ಕರೆಯಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು