Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:32 - ಕನ್ನಡ ಸತ್ಯವೇದವು C.L. Bible (BSI)

32 ಅದಕ್ಕೆ ಯೋನಾತಾನನು, “ಅವನು ಏಕೆ ಸಾಯಬೇಕು? ಅವನು ಏನು ಮಾಡಿದ್ದಾನೆ?” ಎಂದು ತಂದೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದಕ್ಕೆ ಯೋನಾತಾನನು - ಅವನು ಯಾಕೆ ಸಾಯಬೇಕು, ಅವನು ಏನು ಮಾಡಿದನು ಎಂದು ತನ್ನ ತಂದೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೋನಾತಾನನು ತನ್ನ ತಂದೆಗೆ, “ದಾವೀದನನ್ನು ಏಕೆ ಕೊಲ್ಲಬೇಕು? ಅವನು ಮಾಡಿದ ತಪ್ಪಾದರೂ ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದಕ್ಕೆ ಯೋನಾತಾನನು ತನ್ನ ತಂದೆ ಸೌಲನಿಗೆ ಉತ್ತರವಾಗಿ, “ಅವನನ್ನು ಏಕೆ ಕೊಲೆಮಾಡಬೇಕು? ಅವನು ಏನು ಮಾಡಿದನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:32
17 ತಿಳಿವುಗಳ ಹೋಲಿಕೆ  

“ಏಕೆ? ಇವನೇನು ಕೇಡುಮಾಡಿದ್ದಾನೆ?” ಎಂದು ಪಿಲಾತನು ಕೇಳಲು, “ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಅವರು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.


ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.


ಆಗ ಯಕೋಬನಿಗೆ ಸಿಟ್ಟು ಬಂದಿತು, ಅವನು ಲಾಬಾನನೊಡನೆ ಹೀಗೆಂದು ವಾಗ್ವಾದ ಮಾಡಿದನು - “ನೀವು ಇಷ್ಟು ಆತುರಪಟ್ಟು ನನ್ನನ್ನು ಹಿಂದಟ್ಟಿ ಬರಲು ನಾನು ಮಾಡಿದ ತಪ್ಪೇನು?


ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ.


ಕೋಪಿಷ್ಠನ ಸಂಗಡ ಸ್ನೇಹ ಬೆಳೆಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.


ಅವರು ‘ಹಾಗೆಯೇ ಆಗಲಿ’ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವರಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.


ಆಗ ಸೌಲನು, “ಗೋಡೆಗೆ ಕಚ್ಚಿಕೊಳ್ಳುವಂತೆ ಈ ದಾವೀದನನ್ನು ತಿವಿಯುವೆನು,” ಎಂದುಕೊಂಡು ಅವನತ್ತ ಈಟಿಯನ್ನು ಎರಡುಸಾರಿ ಎಸೆದನು. ಎರಡು ಸಾರಿಯೂ ದಾವೀದನು ತಪ್ಪಿಸಿಕೊಂಡನು.


ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿದನು. “ಒಡೆಯರಾದ ತಾವು ತಮ್ಮ ಸೇವಕ ದಾವೀದನಿಗೆ ಅನ್ಯಾಯ ಮಾಡಬಾರದು; ಅವನು ನಿಮಗೆ ದ್ರೋಹ ಮಾಡಲಿಲ್ಲ; ಅವನು ಮಾಡಿದ್ದೆಲ್ಲವು ನಿಮ್ಮ ಹಿತಕ್ಕಾಗಿಯೇ.


ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?


ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು