Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:1 - ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ನೋಬ್ ಊರಲ್ಲಿದ್ದ ಯಾಜಕ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡನು. “ನಿಮ್ಮ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ; ನೀವು ಒಬ್ಬರೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು - ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ! ನೀನು ಒಬ್ಬನೇ ಬಂದದ್ದೇಕೆ ಎಂದು ಅವನನ್ನು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ದಾವೀದನು ಹೊರಟುಹೋದನು. ಯೋನಾತಾನನು ಪಟ್ಟಣಕ್ಕೆ ಹಿಂದಿರುಗಿದನು. ದಾವೀದನು ನೋಬ್ ಎಂಬ ಪಟ್ಟಣದ ಯಾಜಕನಾದ ಅಹೀಮೆಲೆಕನನ್ನು ನೋಡಲು ಹೋದನು. ಅಹೀಮೆಲೆಕನು ದಾವೀದನನ್ನು ಸಂಧಿಸಲು ಹೊರಗೆ ಬಂದನು. ಅಹೀಮೆಲೆಕನು ಭಯದಿಂದ ನಡುಗುತ್ತಿದ್ದನು. ಅಹೀಮೆಲೆಕನು ದಾವೀದನಿಗೆ, “ನೀನು ಒಬ್ಬಂಟಿಗನಾಗಿ ಬಂದಿರುವುದೇಕೆ? ಬೇರೆ ಯಾವ ವ್ಯಕ್ತಿಯೂ ನಿನ್ನ ಜೊತೆಯಲ್ಲಿಲ್ಲದಿರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ನೋಬಿನಲ್ಲಿರುವ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ, “ಒಬ್ಬರೂ ನಿನ್ನ ಸಂಗಡ ಬಾರದೆ, ನೀನು ಒಂಟಿಯಾಗಿ ಬಂದದ್ದೇನು?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:1
7 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು.


ಅದೇ ದಿನ ಬೀಡುಬಿಡುವರು ಶತ್ರುಗಳು ನೋಬಿನಲ್ಲಿ; ಸಿಯೋನ್ ಬೆಟ್ಟದ ಕಡೆಗೆ, ಜೆರುಸಲೇಮಿನ ಗುಡ್ಡದ ಕಡೆಗೆ ಮುಷ್ಟಿ ತೋರಿಸುತ್ತಿಹರಿದೊ ಆ ದಿಕ್ಕಿಗೆ.


ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು,


‘ಏಫೋದ’ನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದನು. ಈ ಅಹೀಯನು ಶಿಲೋವಿನಲ್ಲಿ ಸರ್ವೇಶ್ವರನ ಯಾಜಕನಾಗಿದ್ದ ಏಲಿಯ ಮರಿಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ಅವರಿಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು