Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:5 - ಕನ್ನಡ ಸತ್ಯವೇದವು C.L. Bible (BSI)

5 ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗ ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾಗ್ರಿಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನವಂತು ಅವು ಮತ್ತಷ್ಟು ಪರಿಶುದ್ಧವಾಗಿ ಇರುತ್ತವಲ್ಲವೇ?’ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದಲ್ಲವೇ” ಎಂದು ಉತ್ತರ ಕೊಟ್ಟನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಮ್ಮ ಎಲ್ಲಾ ಯುದ್ಧಪ್ರಯಾಣಗಳಲ್ಲಿ ಸ್ತ್ರೀನಿಷೇಧ ಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾನುಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುವವಲ್ಲವೇ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಯಾಜಕನಿಗೆ, “ನಾವು ಯಾವ ಹೆಂಗಸಿನೊಂದಿಗೂ ಲೈಂಗಿಕ ಸಂಬಂಧ ಹೊಂದಿಲ್ಲ. ನನ್ನ ಜನರು ಯುದ್ಧಕ್ಕೆ ಹೋಗುವಾಗಲೂ ಸಾಧಾರಣಕಾರ್ಯಕ್ಕೆ ಹೋಗುವಾಗಲೂ ತಮ್ಮ ದೇಹಗಳನ್ನು ಶುಚಿಯಾಗಿಟ್ಟುಕೊಳ್ಳುತ್ತಾರೆ. ನಮ್ಮ ಇಂದಿನ ಕಾರ್ಯವು ವಿಶೇಷವಾದ್ದರಿಂದ ನಾವು ಖಂಡಿತವಾಗಿ ಪವಿತ್ರರಾಗಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನು ಯಾಜಕನಿಗೆ ಉತ್ತರವಾಗಿ, “ನಾನು ಹೊರಡುವುದಕ್ಕಿಂತ ಮುಂಚೆ ನಿನ್ನೆಯೂ, ಮೊನ್ನೆಯೂ ಸ್ತ್ರೀಯರು ನಮಗೆ ದೂರವಾಗಿದ್ದರು. ಅಪವಿತ್ರವಾದ ಕಾರ್ಯಗಳಿಗೆ ಹೋಗುವಾಗಲೂ ಪುರುಷರು ಶುದ್ಧರಾಗಿರುತ್ತಾರೆ. ಇಂದು ಅದಕ್ಕಿಂತಲೂ ಹೆಚ್ಚಾಗಿರುವರಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:5
10 ತಿಳಿವುಗಳ ಹೋಲಿಕೆ  

ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಆ ರೊಟ್ಟಿಗಳನ್ನು ದೇವಸ್ಥಾನದ ಪ್ರಾಕಾರದಲ್ಲೇ ತಿನ್ನಬೇಕು. ಅವು ಸರ್ವೇಶ್ವರನಿಗೆ ಸಮರ್ಪಿತವಾದ ದಹನದ್ರವ್ಯಗಳಿಗೆ ಸೇರಿದವುಗಳಾಗಿರುವುದರಿಂದ ಶಾಶ್ವತ ನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.


ಸರ್ವೇಶ್ವರನ ಸನ್ನಿಧಿಯಲ್ಲಿ ಬುಟ್ಟಿಯಲ್ಲಿಟ್ಟಿದ್ದ ಹುಳಿಯಿಲ್ಲದ ತಿಂಡಿಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.


ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.


ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ಅಂತೆಯೇ ಮೋಶೆ ಬೆಟ್ಟದಿಂದ ಇಳಿದು ಬಂದು ಜನರನ್ನು ಪರಿಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.


ಆಗ ಮೋಶೆ ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ; ಯಾವ ಪುರುಷನು ಸ್ತ್ರೀಸಂಗ ಮಾಡಬಾರದು,” ಎಂದು ಹೇಳಿದನು.


ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು